ಶಿವಮೊಗ್ಗ: ವಿಶ್ವಕರ್ಮವು ಪುರಾತನ ಕಾಲದಿಂದ ನಡೆದು ಬಂದ ಸಮಾಜವಾಗಿದ್ದು, ಈ ಸಮಾಜದ ಗುರುಗಳು ಎಲ್ಲಾ ದೇವರಿಗೂ ಗುರುಗಳಾಗಿದ್ದರೆಂದು ಹೇಳಲಾಗುತ್ತದೆ ಎಂದು ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ಹೇಳಿದರು.
ಚಿತ್ರದುರ್ಗ ರಾಷ್ಟ್ರೀಯ ವಿಶ್ವಕರ್ಮ ವಂಶಿ ಸೇನೆಯ ಜಿಲ್ಲಾಧ್ಯಕ್ಷೆ ಪಿ.ಜಿ.ಅನಿತಲಕ್ಷ್ಮಿ ಆಚಾರ್ಯ ಉಪನ್ಯಾಸ ನೀಡಿ, ನಮ್ಮ ಸಮುದಾಯ ಅಭಿವೃದ್ಧಿ ಆಗಬೇಕಾದರೆ ನಮ್ಮನ್ನು ನಾವು ಕಲೆಗೆ ಒಳಪಡಿಸಿಕೊಳ್ಳಬೇಕು. ಅದನ್ನು ಉಳಿಸುವ ಕೆಲಸ ಮಾಡಬೇಕು. ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು, ತಿದ್ದಿಕೊಳ್ಳಬೇಕು. ಮೂಢನಂಭಿಕೆಯಿಂದ ಆಚೆ ಬರಬೇಕು. ಹಿಂದೂ ಮುಸ್ಲಿಂ ಒಳಗೊಂಡಂತಹ ಭಾವೈಕ್ಯ ಮಂತ್ರ ನಮ್ಮ ಸಮಾಜದಲ್ಲಿದೆ. ಇದನ್ನು ಪಾಲನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ಜಿಲ್ಲಾ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಅಗರದಹಳ್ಳಿ ನಿರಂಜನಮೂರ್ತಿ, ಕಾಳಿಕಾ ಪರಮೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ರಮೇಶ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಉಮೇಶ್ ಹಾಗೂ ಸಮಾಜ ಮುಖಂಡರಿದ್ದರು.