ಪ್ರತಿಮೆ ಕೆತ್ತನೆಗೆ ವಿಶ್ವಕರ್ಮ ಸಮಾಜ ಕೊಡುಗೆ ಅಪಾರ: ಡಾ. ಸೋಮಣ್ಣ

KannadaprabhaNewsNetwork |  
Published : Sep 18, 2024, 01:49 AM IST
ಚಿತ್ರ : 17ಎಂಡಿಕೆ2 : ಶ್ರೀ ಭಗವಾನ್ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ.  | Kannada Prabha

ಸಾರಾಂಶ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಶ್ರೀ ಭಗವಾನ್ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಜೆ.ಸೋಮಣ್ಣ ಉಪನ್ಯಾಸ ನೀಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸೋಮನಾಥಪುರ ದೇವಾಲಯ ಸೇರಿದಂತೆ ವಿವಿಧ ದೇವಾಲಯ ಹಾಗೂ ಮೂರ್ತಿ, ಪ್ರತಿಮೆಗಳ ಕೆತ್ತನೆಯಲ್ಲಿ ವಿಶ್ವಕರ್ಮ ಸಮಾಜದವರ ಕೊಡುಗೆ ಅಪಾರ ಎಂದು ಸಾಹಿತಿ ಡಾ.ಜೆ.ಸೋಮಣ್ಣ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಶ್ರೀ ಭಗವಾನ್ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಎಂಜಿನಿಯರ್‌ಗಳ ರೀತಿಯಲ್ಲಿ ವಿಶ್ವಕರ್ಮರು ಮರ, ಚಿನ್ನ ಕೆತ್ತನೆ, ಕಬ್ಬಿಣ ಕೆಲಸ ಹೀಗೆ ಹಲವು ರೀತಿಯ ವೃತ್ತಿ ಕೌಶಲ್ಯದಲ್ಲಿ ತೊಡಗಿಸಿಕೊಂಡು ಕಾಯಕವೇ ಕೈಲಾಸ ಎಂಬಂತೆ ವೃತ್ತಿಯನ್ನೇ ಕುಲಕಸುಬನ್ನಾಗಿ ಮಾಡಿಕೊಂಡು ಮುನ್ನಡೆಯುತ್ತಾರೆ ಎಂದು ಸೋಮಣ್ಣ ನುಡಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಯಾವುದೇ ಗೃಹ ನಿರ್ಮಾಣ ಸೇರಿದಂತೆ ಹಲವು ಕಟ್ಟಡ ಕೆಲಸಗಳು, ಮರಗೆಲಸ, ಉಳುಮೆ ಮಾಡುವ ಕೆಲಸದ ಉಪಕರಣಗಳನ್ನು ವಿಶ್ವಕರ್ಮರು ತಯಾರು ಮಾಡುತ್ತಾರೆ. ಆ ನಿಟ್ಟಿನಲ್ಲಿ ದೇಶಕ್ಕೆ ವಿಶ್ವಕರ್ಮ ಸಮಾಜದವರ ಕೊಡುಗೆ ಅಪಾರ ಎಂದರು.

ವಿಶ್ವಕರ್ಮ ಒಕ್ಕೂಟದ ಜಿಲ್ಲಾಧ್ಯಕ್ಷ ಎಸ್.ಜೆ.ದೇವದಾಸ್ ಮಾತನಾಡಿ, ವಿಶ್ವಕರ್ಮ ಸಮಾಜಕ್ಕಾಗಿ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಒದಗಿಸುವಂತೆ ಹಲವು ವರ್ಷಗಳಿಂದ ಮನವಿ ಮಾಡುತ್ತಾ ಬರಲಾಗಿದೆ. ಆ ನಿಟ್ಟಿನಲ್ಲಿ ಈ ವರ್ಷವಾದರೂ ಈಡೇರಿಸುವಂತಾಗಬೇಕು ಎಂದು ಕೋರಿದರು.

ವಿಶ್ವಕರ್ಮ ಸಮಾಜದ ಅಭಿವೃದ್ಧಿಗೆ ನಿವೇಶನ ಒದಗಿಸಿದಲ್ಲಿ ಭವನ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು. ಆ ನಿಟ್ಟಿನಲ್ಲಿ ಈಗಾಗಲೇ ಗುರುತಿಸಲಾಗಿರುವ ಜಾಗವನ್ನು ವಿಶ್ವಕರ್ಮ ಸಮಾಜಕ್ಕೆ ಒದಗಿಸುವಂತಾಗಬೇಕು ಎಂದು ದೇವದಾಸ್ ಮನವಿ ಮಾಡಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಕೋರನ ಸರಸ್ವತಿ ಮಾತನಾಡಿ, ಸಮಾಜದಲ್ಲಿ ಕುಲ ಕಸುಬುಗಳನ್ನು ಗೌರವಿಸಬೇಕು. ಕರಕುಶಲ ಕರ್ಮಿಗಳು ಅನಾದಿಕಾಲದಿಂದಲೂ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸಿ.ರಂಗಧಾಮಪ್ಪ ಮಾತನಾಡಿ, ಎಲ್ಲಿ ಕ್ರಿಯಾ ಚೈತನ್ಯ ಇರುತ್ತದೆ. ಅಲ್ಲಿ ಕೆಲಸ ಕಾಣಬಹುದು. ಆ ನಿಟ್ಟಿನಲ್ಲಿ ಕಬ್ಬಿಣ, ಮರ, ಚಿನ್ನ, ಹೀಗೆ ಪಂಚ ರೀತಿಯ ಕಾರ್ಯ ಕೈಗೊಂಡು ಕಾಯಕ ವೃತ್ತಿಯಲ್ಲಿ ದೇವರನ್ನು ಕಾಣುತ್ತಾರೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೆಗೌಡ ಮಾತನಾಡಿ, ವಿಶ್ವಕರ್ಮ ಸಂಸ್ಕೃತಿ ಸಮಾಜದಲ್ಲಿ ವಿಶೇಷತೆ ಹೊಂದಿದೆ. ವಿಶ್ವಕರ್ಮ ದೇವರ ರೂಪ ಎಂದರೆ ತಪ್ಪಾಗಲಾರದು ಎಂದರು.

ವಿಶ್ವಕರ್ಮ ಸಮಾಜ ಸೇವಾ ಸಂಘದ ತಾಲೂಕು ಘಟಕದ ಅಧ್ಯಕ್ಷ ಜಿ.ಜಗದೀಶ್ ಆಚಾರ್ಯ, ಪ್ರಮುಖರಾದ ಪ್ರಕಾಶ್ ಆಚಾರ್ಯ, ಅಶೋಕ್ ಆಚಾರ್, ನಾಗರಾಜ ಆಚಾರ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ವಿಶಾಲ್ ಕುಮಾರ್ ಮತ್ತಿತರರು ಇದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಸ್ವಾಗತಿಸಿದರು. ಬಿ.ಸಿ.ಶಂಕರಯ್ಯ ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು