ಕಾಳಿಕಾಂಬ ದೇವಸ್ಥಾನದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ
ನಮ್ಮ ಇತಿಹಾಸವನ್ನು ಕಟ್ಟಿಕೊಡುವಲ್ಲಿ ಪ್ರಾಚೀನ ಸ್ಮಾರಕಗಳು ಮತ್ತು ಮಹಲ್ಲುಗಳು ಪ್ರಮುಖ ಪಾತ್ರ ವಹಿಸುತ್ತವೆ. ಅಂತಹ ಸ್ಮಾರಕಗಳನ್ನು ನಿರ್ಮಿಸಿರುವ ನಮ್ಮ ಪೂರ್ವಿಕರ ಶ್ರಮ ಮತ್ತು ಸೃಜನಾತ್ಮಕ ಕಲೆ ಇಂದಿನ ಯುವ ಪೀಳಿಗೆಗೆ ಮಾದರಿಯಾಗಬೇಕು ಎಂದು ಸಮುದಾಯದ ಮುಖಂಡರಾದ ಶ್ರೀನಿವಾಸ ಆಚಾರ್ಯ ಅಭಿಪ್ರಾಯಪಟ್ಟರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ವಿಜಯನಗರ ಕಾಳಿಕಾಂಬ ದೇವಸ್ಥಾನದ ಆವರಣದಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಈ ಸಮುದಾಯವು ಹಿಂದಿನ ಕಾಲದಿಂದಲೂ ಐದು ಕಸುಬುಗಳನ್ನು ತಮ್ಮ ವೃತ್ತಿಯನ್ನಾಗಿ ಮಾಡಿಕೊಂಡಿದೆ. ಈ ಐದು ವೃತ್ತಿಗಳು ಮನುಷ್ಯನ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ವೃತ್ತಿಯಾಗಿವೆ. ಪುರಾಣಗಳ ಪ್ರಕಾರ ವಿಶ್ವಕರ್ಮರು ಇಡೀ ಪ್ರಪಂಚವನ್ನು ಸೃಷ್ಟಿಸಿದವರು. ರಾಮಾಯಾಣದಲ್ಲಿ ಬರುವ ಶ್ರೀಲಂಕ ಹಾಗೂ ಮಹಾಭಾರತದ ಬರುವ ಇಂದ್ರಪ್ರಸ್ಥ ಪ್ರದೇಶಗಳಲ್ಲಿ ಭವ್ಯ ಅರಮನೆಯನ್ನು ವಿಶ್ವಕರ್ಮರು ನಿರ್ಮಿಸಿದ್ದನ್ನು ಕಾಣಬಹುದು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಕ್ರೀಂಡಾಗಣದಿಂದ ವಿಜಯನಗರ ಕಾಳಿಕಾಂಬ ದೇವಸ್ಥಾನದವರೆಗೆ ಬೆಳ್ಳಿರಥದಲ್ಲಿ ದೇವರ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಚಾಲನೆ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿದೇರ್ಶಕ ರಮೇಶ್ಬಾಬು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಜೆ.ಅರ್ಪಿತಾ, ತಾಲೂಕು ವ್ಶೆದ್ಯಾಧಿಕಾರಿ ಡಾ.ಉಮಾ, ಡಾ.ಮಧುಮತಿ, ಸಾಹಿತಿ ಶೈಲಾಜ, ಸಮುದಾಯದ ಮುಖಂಡರಾದ ಪಿ.ಉಮೇಶ್, ರಾಧಾಕೃಷ್ಣ, ಮುತ್ತುರಾಜ್, ಶ್ರೀನಿವಾಸ್ ತಗಡಚಾರ್, ಲಿಂಗಚಾರ್, ಅಪ್ಪಾಜಿಚಾರ್, ಬಸವರಾಜಚಾರ್ ಇದ್ದರು.