ತಳ್ಳುಗಾಡಿ ವ್ಯಾಪಾರಸ್ಥರಿಗೆ ಕೊಡೆ ವಿತರಣೆ

KannadaprabhaNewsNetwork |  
Published : Jan 16, 2025, 12:45 AM IST
27 | Kannada Prabha

ಸಾರಾಂಶ

ತರಕಾರಿ ವ್ಯಾಪಾರಿಗಳು, ಹೂವಿನ ವ್ಯಾಪಾರಿಗಳು, ಹಣ್ಣು ಹಾಗೂ ಎಳೆನೀರು ಮಾರಾಟಗಾರರಿಗೆ ವಿತರಿಸಲಾಯಿತು

ಕನ್ನಡಪ್ರಭ ವಾರ್ತೆ ಮೈಸೂರುಕುವೆಂಪುನಗರದ 47ನೇ ವಾರ್ಡ್ನ ವಿಶ್ವಮಾನವ ಜೋಡಿ ರಸ್ತೆಯ ಸುಮಸುಪಾನ ಉದ್ಯಾನವನದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ತಳ್ಳುಗಾಡಿ ವ್ಯಾಪಾರಸ್ಥರಿಗೆ ಉಚಿತವಾಗಿ 32 ಸ್ಟ್ಯಾಂಡಿಂಗ್ ಕೊಡೆಗಳನ್ನು ವಿತರಿಸಲಾಯಿತು. ತರಕಾರಿ ವ್ಯಾಪಾರಿಗಳು, ಹೂವಿನ ವ್ಯಾಪಾರಿಗಳು, ಹಣ್ಣು ಹಾಗೂ ಎಳೆನೀರು ಮಾರಾಟಗಾರರಿಗೆ ವಿತರಿಸಲಾಯಿತು. ಎಚ್.ವಿ. ರಾಜೀವ್ ಸ್ನೇಹ ಬಳಗದ ಸದಸ್ಯರಾದ ಆರ್. ಕುಮಾರ್ ಮತ್ತು ಕೋರಿ ವೀರೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಗಿಡಗಳನ್ನು ನೆಡುವ ಮೂಲಕ ಪರಿಸರ ರಕ್ಷಣೆ ಕುರಿತು ಜಾಗೃತಿ ಮೂಡಿಸಲಾಯಿತು. ಆಟೋ ಕುಮಾರ್, ಪ್ರಕಾಶ್, ಆಟೋ ರವಿ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ