ಕನ್ನಡಪ್ರಭ ವಾರ್ತೆ ಯಾದಗಿರಿ
ಶುಕ್ರವಾರ, ನಗರದ ಮುದ್ನಾಳ ಕ್ರಾಸ್ ಹತ್ತಿರ ಮುದ್ನಾಳ ಅಭಿಮಾನಿಗಳ ಬಳಗ ನಿರ್ಮಾಣ ಮಾಡಿರುವ ಅವರ ಕಂಚಿನ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಲಿಂ.ಮುದ್ನಾಳ ಅವರು ಯಾವಾಗಲೂ ಅನ್ಯಾಯ, ಅಧರ್ಮದ ವಿರುದ್ಧ ತಮ್ಮ ಗಟ್ಟಿ ಧ್ವನಿ ಎತ್ತಿದವರು. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿದಂತಹ ವ್ಯಕ್ತಿ, ಅವರ ಆದರ್ಶ ಜೀವನ ಇಂದಿನ ಯುವಕರಿಗೆ ದಾರಿದೀಪವಾಗಲಿ ಎಂದು ಹಾರೈಸಿದ ರಂಭಾಪುರಿ ಶ್ರೀಗಳು, ಬದುಕಿನುದ್ದಕ್ಕೂ ಕಲ್ಯಾಣ ಕರ್ನಾಟಕ ಭಾಗದ ಜನರಲ್ಲಿ ಸಾಮರಸ್ಯ, ರಾಷ್ಟ್ರಪ್ರೇಮ, ಐಕ್ಯತೆ ಮೂಡಿಸುವ ಜೊತೆಗೆ ಅಭಿವೃದ್ಧಿಗೆ ಮುದ್ನಾಳ ಅವರು ತಮ್ಮದೇಯಾದ ಕೊಡುಗೆ ನೀಡಿದ್ದಾರೆಂದರು.ಮಹಾತ್ಮ ಗಾಂಧಿಜೀಯವರ ಸರಳ ಜೀವನ ಹಾಗೂ ಸ್ವಾತಂತ್ರ ಸೇನಾನಿ ನೇತಾಜಿ ಸುಭಾಶ್ಚಂದ್ರ ಭೋಸರು ದೇಶಕ್ಕಾಗಿ ನಡೆಸಿದ ಹೋರಾಟದ ಗುಣಗಳನ್ನು ಮೈಗೂಡಿಸಿಕೊಂಡು ಕಲ್ಯಾಣ ಕರ್ನಾಟಕ ಏಕೀಕರಣಕ್ಕಾಗಿ ಶ್ರಮಿಸಿದರು, ಅವರಿಗೆ ವ್ಯಯಕ್ತಿಕ ಹಿತಾಸಕ್ತಿ ಬದಿಗಿಟ್ಟು, ಜನರ ಸಮಸ್ಯೆಗಳಿಗೆ ಸ್ಪಂಧಿಸಿದ ಕೀರ್ತಿ ಸಲ್ಲುತ್ತದೆ, ಅದಕ್ಕೆ ಈ ಸಮಾರಂಭವೇ ಸಾಕ್ಷಿ ಎಂದು ಹೇಳಿದರು.
ಅಬ್ಬೆತುಮಕೂರಿನ ವಿಶ್ವಾರಾಧ್ಯ ಮಠದ ಪೀಠಾಧಿಪತಿ ಡಾ.ಗಂಗಾಧರ ಸ್ವಾಮೀಜಿ ಮಾತನಾಡಿ, ಲಿಂ.ಮುದ್ನಾಳ ಅವರು ಬಹುಮುಖ ವ್ಯಕ್ತಿತ್ವ ಹೊಂದಿದ ಶಕ್ತಿಯಾಗಿದ್ದರು, ಅಂದಿನ ಸಮಾಜದಲ್ಲಿ ಜನರನ್ನು ಕಾಡುತ್ತಿರುವ ಸಮಸ್ಯೆ ಹೋಗಲಾಡಿಸಲು ಕೆಲಸ ಮಾಡಿದರು ಎಂದು ಹೇಳಿದರು. ಸಮಾರಂಭದಲ್ಲಿ ವಿವಿಧ ಮಠಾಧೀಶರು ಹಾಗೂ ರಾಜಕೀಯ ಗಣ್ಯರು ಉಪಸ್ಥಿತರಿದ್ದರು.