ಹಾನಗಲ್ಲ: ತಾಲೂಕಿನಲ್ಲಿ ಕಳೆದ ೫ ವರ್ಷಗಳಲ್ಲಿ ದೃಷ್ಟಿಕೇಂದ್ರ ಮತ್ತು ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರಗಳ ಮೂಲಕ ೩೦ ಸಾವಿರಕ್ಕೂ ಹೆಚ್ಚು ಜನರ ನೇತ್ರ ತಪಾಸಣೆ ಕೈಗೊಳ್ಳಲಾಗಿದ್ದು, ೪,೨೦೦ ಜನರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿ ದೃಷ್ಟಿಭಾಗ್ಯ ಮರಳಿಸಿದ ತೃಪ್ತಿ ಇದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಟಿಎಚ್ಒ ಡಾ. ಲಿಂಗರಾಜ ಕೆ.ಜಿ. ಮಾತನಾಡಿ, ಬದಲಾದ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದ ನೇತ್ರಗಳು ಬಹುಬೇಗ ಹಾಳಾಗುತ್ತಿವೆ. ನಿಯಮಿತವಾಗಿ ತಪಾಸಣೆಗೆ ಒಳಪಟ್ಟು ನೇತ್ರಗಳ ಸುರಕ್ಷತೆಗೆ ಕಾಳಜಿ ವಹಿಸುವಂತೆ ಕಿವಿಮಾತು ಹೇಳಿದರು.
ಶಿರಸಿಯ ರೋಟರಿ ಚಾರಿಟೇಬಲ್ ಆಸ್ಪತ್ರೆ ಹಾಗೂ ಟೀಂ ಆಪತ್ಬಾಂಧವ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಶಿಬಿರದಲ್ಲಿ ೨೨೦ಕ್ಕೂ ಹೆಚ್ಚು ಜನರ ನೇತ್ರಗಳನ್ನು ತಪಾಸಣೆಗೆ ಒಳಪಡಿಸಿ, ಈ ಪೈಕಿ ೯೬ ಜನರ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು. ಗ್ರಾಪಂ ಅಧ್ಯಕ್ಷ ಬಾಷಾಸಾಬ್ ಗೌಂಡಿ, ಸದಸ್ಯರಾದ ಗುತ್ತೆಪ್ಪ ಹರಿಜನ, ಜಾಫರ್ಸಾಬ ಮುಲ್ಲಾ, ಹುಸೇನಮಿಯಾ ಸವಣೂರು, ಮಾಜಿ ಸದಸ್ಯ ಶಾಂತಪ್ಪ ಶೀಲವಂತರ, ಮಹಬಳೇಶ್ವರಪ್ಪ ಸವಣೂರ, ತಾಪಂ ಮಾಜಿ ಸದಸ್ಯ ಕಲವೀರಪ್ಪ ಪವಾಡಿ, ಬಗರ್ಹುಕುಂ ಸಮಿತಿ ಅಧ್ಯಕ್ಷ ಪುಟ್ಟಪ್ಪ ನರೇಗಲ್, ಮುಖಂಡರಾದ ಎಂ.ಎ. ನೆಗಳೂರ, ಚಮನಸಾಬ ಪಠಾಣ, ಫಕ್ಕೀರೇಶ ಮಾವಿನಮರದ, ಯಲ್ಲಪ್ಪ ನಿಂಬಣ್ಣನವರ, ಪ್ರಭು ಬಮ್ಮಣ್ಣನವರ, ಡಾ. ಫೈರೋಜ್ ಲೋಹಾರ ಇದ್ದರು.