ಐದು ವರ್ಷದಲ್ಲಿ ೪,೨೦೦ ಜನರಿಗೆ ದೃಷ್ಟಿಭಾಗ್ಯ-ಶಾಸಕ ಮಾನೆ

KannadaprabhaNewsNetwork |  
Published : Jan 03, 2025, 12:31 AM IST
ಫೋಟೊ: ೧ಎಚ್‌ಎನ್‌ಎಲ್೨ | Kannada Prabha

ಸಾರಾಂಶ

ಹಾನಗಲ್ಲ ತಾಲೂಕಿನಲ್ಲಿ ಕಳೆದ ೫ ವರ್ಷಗಳಲ್ಲಿ ದೃಷ್ಟಿಕೇಂದ್ರ ಮತ್ತು ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರಗಳ ಮೂಲಕ ೩೦ ಸಾವಿರಕ್ಕೂ ಹೆಚ್ಚು ಜನರ ನೇತ್ರ ತಪಾಸಣೆ ಕೈಗೊಳ್ಳಲಾಗಿದ್ದು, ೪,೨೦೦ ಜನರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿ ದೃಷ್ಟಿಭಾಗ್ಯ ಮರಳಿಸಿದ ತೃಪ್ತಿ ಇದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಹಾನಗಲ್ಲ: ತಾಲೂಕಿನಲ್ಲಿ ಕಳೆದ ೫ ವರ್ಷಗಳಲ್ಲಿ ದೃಷ್ಟಿಕೇಂದ್ರ ಮತ್ತು ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರಗಳ ಮೂಲಕ ೩೦ ಸಾವಿರಕ್ಕೂ ಹೆಚ್ಚು ಜನರ ನೇತ್ರ ತಪಾಸಣೆ ಕೈಗೊಳ್ಳಲಾಗಿದ್ದು, ೪,೨೦೦ ಜನರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿ ದೃಷ್ಟಿಭಾಗ್ಯ ಮರಳಿಸಿದ ತೃಪ್ತಿ ಇದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ತಾಲೂಕಿನ ನರೇಗಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಮ್ಮ ೫೦ನೇ ಜನ್ಮ ವರ್ಷಾಚರಣೆ ಅಂಗವಾಗಿ ನಡೆಯುತ್ತಿರುವ ನಾನಾ ಸಮಾಜೋಪಯೋಗಿ ಕಾರ್ಯಕ್ರಮಗಳ ಪೈಕಿ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಬಡ ಮತ್ತು ಮಧ್ಯಮ ವರ್ಗಗಳಿಗೆ ಸೇರಿದ ಜನರು ದೂರದ ಹುಬ್ಬಳ್ಳಿ, ಶಿರಸಿ, ಹಾವೇರಿ ಸೇರಿದಂತೆ ಹಲವು ನಗರಗಳಿಗೆ ಚಿಕಿತ್ಸೆಗೆ ತೆರಳುತ್ತಾರೆ. ಹಣ ಮತ್ತು ಸಮಯ ವ್ಯಯ ಮಾಡುತ್ತಿದ್ದು, ಇದನ್ನು ತಪ್ಪಿಸಿ ಜನಸಾಮಾನ್ಯರಿಗೆ ಅನುಕೂಲವಾಗಲು ನಿಯಮಿತವಾಗಿ ತಾಲೂಕಿನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿ, ತಜ್ಞರಿಂದ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ಆರೋಗ್ಯ ಸೇವೆ ಹೀಗೆಯೇ ಮುಂದುವರಿಯಲಿದೆ ಎಂದರು.

ಟಿಎಚ್‌ಒ ಡಾ. ಲಿಂಗರಾಜ ಕೆ.ಜಿ. ಮಾತನಾಡಿ, ಬದಲಾದ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದ ನೇತ್ರಗಳು ಬಹುಬೇಗ ಹಾಳಾಗುತ್ತಿವೆ. ನಿಯಮಿತವಾಗಿ ತಪಾಸಣೆಗೆ ಒಳಪಟ್ಟು ನೇತ್ರಗಳ ಸುರಕ್ಷತೆಗೆ ಕಾಳಜಿ ವಹಿಸುವಂತೆ ಕಿವಿಮಾತು ಹೇಳಿದರು.

ಶಿರಸಿಯ ರೋಟರಿ ಚಾರಿಟೇಬಲ್ ಆಸ್ಪತ್ರೆ ಹಾಗೂ ಟೀಂ ಆಪತ್ಬಾಂಧವ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಶಿಬಿರದಲ್ಲಿ ೨೨೦ಕ್ಕೂ ಹೆಚ್ಚು ಜನರ ನೇತ್ರಗಳನ್ನು ತಪಾಸಣೆಗೆ ಒಳಪಡಿಸಿ, ಈ ಪೈಕಿ ೯೬ ಜನರ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು. ಗ್ರಾಪಂ ಅಧ್ಯಕ್ಷ ಬಾಷಾಸಾಬ್‌ ಗೌಂಡಿ, ಸದಸ್ಯರಾದ ಗುತ್ತೆಪ್ಪ ಹರಿಜನ, ಜಾಫರ್‌ಸಾಬ ಮುಲ್ಲಾ, ಹುಸೇನಮಿಯಾ ಸವಣೂರು, ಮಾಜಿ ಸದಸ್ಯ ಶಾಂತಪ್ಪ ಶೀಲವಂತರ, ಮಹಬಳೇಶ್ವರಪ್ಪ ಸವಣೂರ, ತಾಪಂ ಮಾಜಿ ಸದಸ್ಯ ಕಲವೀರಪ್ಪ ಪವಾಡಿ, ಬಗರ್‌ಹುಕುಂ ಸಮಿತಿ ಅಧ್ಯಕ್ಷ ಪುಟ್ಟಪ್ಪ ನರೇಗಲ್, ಮುಖಂಡರಾದ ಎಂ.ಎ. ನೆಗಳೂರ, ಚಮನಸಾಬ ಪಠಾಣ, ಫಕ್ಕೀರೇಶ ಮಾವಿನಮರದ, ಯಲ್ಲಪ್ಪ ನಿಂಬಣ್ಣನವರ, ಪ್ರಭು ಬಮ್ಮಣ್ಣನವರ, ಡಾ. ಫೈರೋಜ್ ಲೋಹಾರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ