ಲಕ್ಷ್ಮೇಶ್ವರ: ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ಏ. 19ರಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಭೇಟಿ ನೀಡಿ, ವೀರಗಂಗಾಧರ ಸ್ವಾಮಿಗಳ ಗದ್ದುಗೆಯ ದರ್ಶನಾಶೀರ್ವಾದ ಪಡೆದು, ತಮ್ಮ ಮನದ ಆಸೆ ಬೇಗ ಈಡೇರುವಂತೆ ಪೂಜೆ ಸಲ್ಲಿಸಿ, ಪ್ರಾರ್ಥಿಸಿದ್ದರು. ಅದರ ಫಲ ಈಗ ಸಿಕ್ಕಿದೆ ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ಧರ್ಮಾಧಿಕಾರಿ ವಿಮಲರೇಣುಕ ವೀರಮುಕ್ತಿ ಮುನಿ ಶಿವಾಚಾರ್ಯ ಸ್ವಾಮಿಗಳು ತಿಳಿಸಿದರು.
ಡಿ.ಕೆ. ಶಿವಕುಮಾರ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಭಾಗ್ಯ ಲಭಿಸುತ್ತಿರುವುದು ಸಂತೋಷ ಸಂಗತಿ. ಡಿ.ಕೆ. ಶಿವಕುಮಾರ ಅವರು ಮುಕ್ತಿಮಂದಿರದ ಧರ್ಮಕ್ಷೇತ್ರದ ನಿರ್ಮಾತೃ ವೀರ ಗಂಗಾಧರ ಸ್ವಾಮಿಗಳ ಪರಮ ಭಕ್ತರಾಗಿದ್ದಾರೆ. ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ ಅವರು ವೀರಗಂಗಾಧರ ಸ್ವಾಮಿಗಳ ಗದ್ದುಗೆಯ ಮುಂದೆ ಒಂದು ಗಂಟೆಗಳ ಕಾಲ ಪೂಜೆ ಸಲ್ಲಿಸಿ, ತಮ್ಮ ಮನದಾಳದ ಆಸೆಗಳನ್ನು ಅಜ್ಜನೊಂದಿಗೆ ಹಂಚಿಕೊಂಡಿದ್ದರು. ಅದರ ಫಲವಾಗಿ ಈಗ ಮುಖ್ಯಮಂತ್ರಿಯಾಗಿ ಅಧಿಕಾರ ದೊರೆಯುವ ಕ್ಷಣ ಸನ್ನಿಹಿತವಾಗಿದ್ದು, ನಮಗೆ ಹೆಚ್ಚು ಸಂತೋಷ ತಂದಿದೆ ಎಂದರು.
ರಂಭಾಪುರಿ ಲಿಂ. ವೀರಗಂಗಾಧರ ಸ್ವಾಮಿಗಳು ಮಹಾನ್ ತಪೋನಿಷ್ಠರಾಗಿದ್ದರು. ಅವರ ತ್ರಿಕೋಟಿ ಲಿಂಗಗಳ ಸ್ಥಾಪನೆಯ ಕನಸು ಸದ್ಯದಲ್ಲಿಯೇ ಈಡೇರುವ ಎಲ್ಲ ಕ್ಷಣಗಳು ಹತ್ತಿರವಾಗುತ್ತಿದೆ. ಮುಕ್ತಿಮಂದಿರ ಧರ್ಮಕ್ಷೇತ್ರ ದೇಶದ ಐತಿಹಾಸಿಕ ಸ್ಥಳಗಳಲ್ಲಿ ಒಂದಾಗಿ ಮೆರೆಯುವ ದಿನಗಳ ದೂರವಿಲ್ಲ. ವೀರಗಂಗಾಧರ ಸ್ವಾಮಿಗಳ ಶಕ್ತಿ ಅಂತಹದ್ದು ಎಂದರು.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿ: ಡಾ. ಪುರುಷೋತ್ತಮನಾಂದಪುರಿ ಶ್ರೀ