ಕನ್ನಡಪ್ರಭವಾರ್ತೆ ಮೂಲ್ಕಿ
ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಸತೀಶ್ ಮಾತನಾಡಿ, ರಾಜ್ಯದಲ್ಲಿ ಬೇರೆಲ್ಲೂ ನಮ್ಮ ಜಿಲ್ಲೆಯಲ್ಲಿ ನಡೆಯುವಂತೆ ಶಿಸ್ತುಬದ್ಧವಾಗಿ ವಾಲಿಬಾಲ್ ಪಂದ್ಯಾಟ ನಡೆಯುವುದಿಲ್ಲ. ಕೇರಳದಲ್ಲಿ ಕ್ರೀಡಾಕೂಟಗಳು ಸಾಮಾನ್ಯವಾಗಿ ನಡೆಯುತ್ತದೆ. ನಮ್ಮಲ್ಲಿ ಕ್ರೀಡೆಗೆ ಸಹಕಾರ ನೀಡುವವರು ಕಡಿಮೆಯಿದ್ದು ಬಹಳಷ್ಟು ಮಂದಿ ಬೆಂಬಲ ನೀಡುತ್ತಿರುವುದು ಶ್ಲಾಘನೀಯ ವಿಚಾರ ಎಂದು ದು ಹೇಳಿದರು.
ಬಿಎಎಸ್ ಎಫ್ ನ ಸೀನಿಯರ್ ಮ್ಯಾನೇಜರ್ ಸಂತೋಷ್ ಪೈ, ವೈದ್ಯ ಶಶಿರಾಜ್ ಶೆಟ್ಟಿ, ಅಂಜನಾ ಎಂ. ಶೆಟ್ಟಿ, ಯಜ್ನೇಶ್ವರ್ ಬರ್ಕೆ, ಉದ್ಯಮಿ ಸತೀಶ್ ಮುಂಚೂರು, ಮನಪಾ ಸದಸ್ಯ ಲೋಕೇಶ್ ಬೊಳ್ಳಾಜೆ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ, ಮುಂಚೂರು, ಉದ್ಯಮಿ ಗಿರೀಶ್ ಶೆಟ್ಟಿ ಕಟೀಲ್, ಜನನಿ ಕನ್ಸ್ ಟ್ರಕ್ಸನ್ ನ ಮಾಲಕ ಸುಧಾಕರ್ ಪೂಂಜಾ, ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಟ್ರಸ್ಟಿ ಸಹನಾ ರಾಜೇಶ್ ರೈ, ಸಂಘಟನೆಯ ಗೌರವಾಧ್ಯಕ್ಷ ಸಂಚಾಲಕ ಮಹಾಬಲ ಪೂಜಾರಿ ಕಡಂಬೋಡಿ, ಅಧ್ಯಕ್ಷ ಸುಕುಮಾರ್ ತಡಂಬೈಲ್, ಕಾರ್ಯದರ್ಶಿ ರೂಪೇಶ್ ರೈ ಕೈಲಾಸ್ ತಡಂಬೈಲ್, ಪದ್ಮನಾಭ ಕರ್ಕೇರ, ರಾಘವೇಂದ್ರ ಶೆಟ್ಟಿ ತಡಂಬೈಲ್ ಮತ್ತಿತರರು ಉಪಸ್ಥಿತರಿದ್ದರು.ಸಮಾರಂಭದಲ್ಲಿ ಉದ್ಯಮಿ ಮಧ್ಯಗುತ್ತು ಕರುಣಾಕರ ಎಂ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಶಾಸಕ ಡಾ ವೈ ಭರತ್ ಶೆಟ್ಟಿ, ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ , ಪಾಂಡುರಂಗ ಕೆ ಪ್ರಭು ಕೊಡಿಪಾಡಿ, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಅಶೋಕ್ ಶೆಟ್ಟಿ ತಡಂಬೈಲ್ ಭಾಗವಹಿಸಿದ್ದರು. ಅನುಪ್ ಶೆಟ್ಟಿ ಸ್ತುತಿಸಿದರು. ಅಶೋಕ್ ಶೆಟ್ಟಿ ತಡಂಬೈಲ್ ಸ್ವಾಗತಿಸಿದರು. ನಿತೇಶ್ ಶೆಟ್ಟಿ ಎಕ್ಕಾರ್, ಬಿಂದಿಯ ಶೆಟ್ಟಿ, ಅನೂಪ್ ಶೆಟ್ಟಿ, ರಾಮಚಂದ್ರ ಶೆಟ್ಟಿ ತಡಂಬೈಲ್ ಕಾರ್ಯಕ್ರಮ ನಿರೂಪಿಸಿದರು.