ದಾವಣಗೆರೆ-ಬೆಂಗಳೂರು ವಿಮಾನ ನಿಲ್ದಾಣಕ್ಕೆ ವೋಲ್ವೋ ಬಸ್: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌

KannadaprabhaNewsNetwork |  
Published : Nov 13, 2025, 12:45 AM IST
ಕ್ಯಾಪ್ಷನ12ಕೆಡಿವಿಜಿ36 ದಾವಣಗೆರೆಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ನೇರ ಬಸ್ಸಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಚಾಲನೆ ನೀಡಿದರು. | Kannada Prabha

ಸಾರಾಂಶ

ಕೆಎಸ್‌ಆರ್‌ಟಿಸಿ ದಾವಣಗೆರೆ ಬಸ್ ನಿಲ್ದಾಣದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೇರ ಫ್ಲೆöÊಬಸ್ (ವೋಲ್ವೋ) ಸೇವೆಯ ನೂತನ ಮಾರ್ಗಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ದಾವಣಗೆರೆ: ಕೆಎಸ್‌ಆರ್‌ಟಿಸಿ ದಾವಣಗೆರೆ ಬಸ್ ನಿಲ್ದಾಣದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೇರ ಫ್ಲೆöÊಬಸ್ (ವೋಲ್ವೋ) ಸೇವೆಯ ನೂತನ ಮಾರ್ಗಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ದಾವಣಗೆರೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬುಧವಾರ ನೂತನ ವೋಲ್ವೊ ಬಸ್‌ಗೆ ಚಾಲನೆ ನೀಡಿದರು.

ದಾವಣಗೆರೆಯಿಂದ ಬೆಳಿಗ್ಗೆ 10 ಗಂಟೆಗೆ ಹೊರಡುವ ಈ ಬಸ್ ಚಿತ್ರದುರ್ಗ, ತುಮಕೂರು, ದಾಬಸ್‌ಪೇಟೆ ಮಾರ್ಗವಾಗಿ ಮಧ್ಯಾಹ್ನ 1 ಗಂಟೆಗೆ ಹಾಗೂ ಸಂಜೆ 5 ಗಂಟೆಗೆ ಹೊರಟು ರಾತ್ರಿ 10 ಗಂಟೆಗೆ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ. ಹಾಗೆಯೇ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಮಧ್ಯರಾತ್ರಿ 12.45ಕ್ಕೆ ಹೊರಟು ಅದೇ ಮಾರ್ಗವಾಗಿ ಮುಂಜಾನೆ 5.45ಕ್ಕೆ ಹಾಗೂ ಬೆಳಗ್ಗೆ 10 ಗಂಟೆಗೆ ಹೊರಡುವ ಬಸ್ ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ಬಸ್ ನಿಲ್ದಾಣ ಸೇರಲಿರುವ ಬಸ್ ಇದೇ ಮಾರ್ಗವಾಗಿ ಪ್ರತಿನಿತ್ಯ ಸಂಚರಿಸಲಿದೆ ಎಂದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತುಮಕೂರು ಬಸ್ ನಿಲ್ದಾಣಕ್ಕೆ ರೂ.400, ಚಿತ್ರದುರ್ಗಕ್ಕೆ ರೂ. 980 ಹಾಗೂ ದಾವಣಗೆರೆಗೆ 1250 ರೂ ದರ ನಿಗಧಿಪಡಿಸಲಾಗಿದೆ. ಅದಷ್ಟೇ ಅಲ್ಲದೇ ಪ್ರಯಾಣಿಕರ ಅನುಕೂಲಕ್ಕಾಗಿ ಚಿತ್ರದುರ್ಗ ಬೈಪಾಸ್ ಮತ್ತು ತುಮಕೂರು ಬೈಪಾಸ್ ಸೇರಿ ಎರಡು ಮಾರ್ಗದ ಮಧ್ಯೆ ಪಿಕಪ್ ಮತ್ತು ಡ್ರಾಪ್ ಪಾಯಿಂಟ್ ಸಹ ನೀಡಲಾಗಿದೆ. ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್ ಸೇವೆ ಪಡೆಯಲು ತಿಳಿಸಿದರು.

ಕೆಎಸ್‌ಆರ್‌ಟಿಸಿ ಡಿಸಿ ಶಿವಕುಮಾರಯ್ಯ, ಮಾರ್ಗ ನಿಯಂತ್ರಣಾಧಿಕಾರಿ ಫಕ್ರುದ್ದೀನ್ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಮ್ಮನ್ನು ನಾವು ಅರಿತುಕೊಳ್ಳುವುದೇ ಆಂತರಿಕ ನಡುಗೆ
ಹೆತ್ತವರನ್ನು ಕಡೆಗಣಿಸುವುದು ಅಮಾನವೀಯತೆ