ಕನ್ನಡಪ್ರಭ ವಾರ್ತೆ ಸೊರಬ
ಗುರುವಾರ ರಾತ್ರಿ ಚಂದ್ರಗುತ್ತಿ ಗ್ರಾಮದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಪರವಾಗಿ ಹಮ್ಮಿಕೊಂಡ ರೋಡ್ ಶೋ ಕಾರ್ಯಕ್ರಮದಲ್ಲಿ ಮತಯಾಚಿಸಿ ಅವರು ಮಾತನಾಡಿದರು.
ಗೀತಾ ಅವರನ್ನು ಸೊರಬ ಕ್ಷೇತ್ರದ ಜನತೆ ಸುಮಾರು ೭೫ ಸಾವಿರ ಮತಗಳ ಅಂತರದಿಂದ ಸಂಸದರಾಗಿ ಆಯ್ಕೆ ಮಾಡಿದರೆ ಕೇಂದ್ರದಲ್ಲಿ ಈ ಬಗ್ಗೆ ಧ್ವನಿ ಎತ್ತಲಿದ್ದಾರೆ. ಜೊತೆಗೆ ತಮಗೂ ಸಹ ಶಕ್ತಿ ದೊರೆಯಲಿದೆ ಎಂದ ಅವರು, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವಾಗಿ ಹಗುರವಾಗಿ ಮಾತನಾಡುವವರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಾರೆ. ಈಗಾಗಲೇ ಅವರು ಸೋತು ಸುಣ್ಣವಾಗಿದ್ದಾರೆ ಎಂದು ಲೇವಡಿ ಮಾಡಿದರು.ಕ್ಷೇತ್ರದ ಅಭ್ಯರ್ಥಿ ಗೀತಾ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವದಲ್ಲಿ ನುಡಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ತಂದೆ ಹಾಗೂ ಸಹೋದರನಂತೆ ನನಗೂ ಸಹ ಕ್ಷೇತ್ರದ ಜನತೆಯ ಸೇವೆ ಮಾಡಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು.
ಕಾಂಗ್ರೆಸ್ ಮುಖಂಡರಾದ ಎಚ್. ಗಣಪತಿ ಹುಲ್ತಿಕೊಪ್ಪ, ತಬಲಿ ಬಂಗಾರಪ್ಪ, ಆರ್.ಶ್ರೀಧರ್ ಹುಲ್ತಿಕೊಪ್ಪ, ಎಂ.ಬಿ. ರೇಣುಕಾಪ್ರಸಾದ್, ಎಂ.ಪಿ. ರತ್ನಾಕರ, ಸುನೀಲ್ಗೌಡ, ಎನ್.ಜಿ. ನಾಗರಾಜ್, ಮರ್ಯಪ್ಪ ಬೆನ್ನೂರು, ಕೆ.ವಿ. ಗೌಡ್ರು, ಜಯಶೀಲಗೌಡ್ರು, ಪ್ರದೀಪ್ ಬಾಡದಬೈಲು, ಷಣ್ಮುಖಪ್ಪ ಚನ್ನಪಟ್ಟಣ, ದರ್ಶನ್ ಚಿಕ್ಕಮಾಕೊಪ್ಪ ಸೇರಿದಂತೆ ಚಂದ್ರಗುತ್ತಿ ಹೋಬಳಿ ವ್ಯಾಪ್ತಿಯ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.