ಕನ್ನಡ ಪ್ರಭ ವಾರ್ತೆ ಚಿತ್ತಾಪುರ
ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು ನಮ್ಮ ಸರ್ಕಾರ ರಾಜ್ಯದ ಜನತೆಗೆ ವಿಧಾನ ಸಭೆ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ೫ ಪ್ರಮುಖ ಗ್ಯಾರಂಟಿ ಯೊಜನೆಗಳನ್ನು ಅಧಿಕಾರ ಪಡೆದ ತಕ್ಷಣವೇ ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದರು.
ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಜಿಲ್ಲೆಯ ಜನರಿಗೆ ನಾನು ಕೊಟ್ಟಿರುವ ೬ ನೇ ಗ್ಯಾರಂಟಿಯನ್ನು ಕೇವಲ ೮ ತಿಂಗಳಲ್ಲಿಯೇ ಅವರ ಮನೆ ಖಾಲಿ ಮಾಡಿಸುವ ಮೂಲಕ ಮತದಾರರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ ಎಂದು ಪರೋಕ್ಷವಾಗಿ ಹೆಸರು ಹೇಳದೇ ಚಿತ್ತಾಪುರ ಬಿಜೆಪಿ ಪರಾಜಿತ ಅಭ್ಯರ್ಥಿಯ ವಿರುದ್ಧ ವಾಗ್ದಾಳಿ ನಡೆಸಿದರು.ಸಭೆಯಲ್ಲಿ ಸಚಿವ ಶರಣಬಸಪ್ಪ ದರ್ಶನಪುರ, ಶಾಸಕರಾದ ಅಲಂಪ್ರಭು ಪಾಟೀಲ, ಎಂವೈ ಪಾಟೀಲ, ತಿಪ್ಪಣ್ಣ÷ಪ್ಪ ಕಮಕನೂರ, ಮಾಜಿ ಸಚಿವ ಬಾಬುರಾವ ಚಿಂಚನಸೂರ, ರೇವುನಾಯಕ ಬೆಳಮಗಿ, ಅವರು ಮಾತನಾಡಿದರು.
ಕೆಕೆಆರ್ಡಿಬಿ ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ. ಅಜಯ್ಸಿಂಗ ಮಾತನಾಡಿ, ಬಿಜೆಪಿ ಅಬ್ ಕೀ ಬಾರ್ ೪೦೦ ಪರ್ ಎಂದು ಘೋಷಣೆ ಮೂಲಕ ಚುನಾವಣೆಯಲ್ಲಿ ಪ್ರಚಾರ ಮಾಡುತ್ತಿದೆ. ಆದ್ರೆ ಮತದಾರರು ಈ ಬಾರಿ ಅವರನ್ನು ೪೦೦ ಪರ್ ನಹೀ, ಬಿಜೆಪಿಯನ್ನು ಅಬ್ ಕೀ ಬಾರ್ ದೇಶ್ ಸೇ ಬಾಹೆರ್ ಮಾಡುವ ಮೂಲಕ ಮತದಾರರು ಪಾಠ ಕಲಿಸುತ್ತಾರೆ ಎಂದರು.