ಕನ್ನಡಪ್ರಭ ವಾರ್ತೆ ಬೀದರ್
ಅವರು ಬೀದರ್ ದಕ್ಷಿಣ ಕ್ಷೇತ್ರದ ರಂಜೊಳ ಖೇಣಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಪರ ಪ್ರಚಾರದಲ್ಲಿ ಮಾತನಾಡಿದರು.
ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ಭೀಮಣ್ಣ ಖಂಡ್ರೆ ಅವರ ಮೊಮ್ಮಗ, ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ ಖಂಡ್ರೆ ಅವರ ಈ ಮನೆತನ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮನೆತನ. ಸದಾ ಜನ ಸೇವೆಯಲ್ಲಿ ಬೆರೆತು ಜನರ ಕಷ್ಟ ಸುಖದಲ್ಲಿ ಭಾಗಿಯಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಎಲ್ಲಾ ಸಮುದಾಯದ ಜನರನ್ನು ಕೊಂಡ್ಯೊಯುವರು. ಕಲ್ಯಾಣ ಕರ್ನಾಟಕದಲ್ಲಿ ತಮ್ಮದೆ ಛಾಪು ಮೂಡಿಸಿದ ಖಂಡ್ರೆ ಮನೆತನ. ಈ ಮನೆತನದ ಯುವ ಅಭ್ಯರ್ಥಿ ಸಾಗರ್ ಖಂಡ್ರೆಗೆ ಸಂಸದರಾಗಿ ದೆಹಲಿಗೆ ಕಳುಸಿದರೆ, ಇಡೀ ದೇಶದಲ್ಲಿ ಬೀದರ್ ಕೀರ್ತಿ ಹೆಚ್ಚುತ್ತದೆ. ಆದ ಕಾರಣ ತಾವು ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಾಗರ್ ಖಂಡ್ರೆಗೆ ಹೆಚ್ಚಿನ ಮತಗಳು ನೀಡಿ ಆಶಿರ್ವಾದಿಸಬೇಕೆಂದು ಮನವಿ ಮಾಡಿದರು.ಸಾಗರ ಖಂಡ್ರೆ ಮಾತನಾಡಿ, ಭಗವಂತ ಖೂಬಾ ಅವರ ಸಾಧನೆ ಶೂನ್ಯ 10 ವರ್ಷದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲಾ ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದಾರೆ ಎಂದರು.