- ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿಕೆ । ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಪರ ಪ್ರಚಾರ । ಕಾಲ್ನಡಿಗೆಯಲ್ಲಿ ತೆರಳಿ ಮತಯಾಚನೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ಪ್ರತಿ ವರ್ಷ ನಮ್ಮ ಕಾಂಗ್ರೆಸ್ ಸರ್ಕಾರ ಸುಮಾರು ₹50 ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ನೀಡುತ್ತಿದೆ. ಇಡೀ ದೇಶದಲ್ಲಿ ಜನರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಗ್ಯಾರಂಟಿ ನೀಡುತ್ತಿರುವುದು ಕರ್ನಾಟಕದಲ್ಲಿ ಮಾತ್ರ ಎಂದು ಡಾ.ಸಂಸದೆ ಪ್ರಭಾ ಮಲ್ಲಿಕಾರ್ಜುನ ಹೇಳಿದರು.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹಳ್ಳಿಗಳಾದ ಕೈದಾಳೆ, ಕೈದಾಳೆ ಕ್ಯಾಂಪ್, ಗಿರಿಯಾಪುರ, ಕುಕ್ಕುವಾಡ, ಹಳೇ ಕೊಳೆನಹಳ್ಳಿ, ಹೊಸ ಕೊಳೆನಹಳ್ಳಿ, ನಾಗರಸನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಕಾಲ್ನಡಿಗೆ ಮೂಲಕ ಮನೆಮನೆಗೆ ಭೇಟಿ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.
ಸಮರ್ಥ್ ಆಲೋಚನೆ ಉತ್ತಮವಾಗಿವೆ. ಶಿಕ್ಷಣದ ವಿಚಾರದಲ್ಲಿ ಅದರಲ್ಲೂ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬುದು ಅವರ ಆಶಯ. ಮತ್ತು ಜನರಿಗೆ ಒಳ್ಳೆಯ ಆರೋಗ್ಯ ನೀಡಬೇಕು. ವೈದ್ಯರ ಸಂಖ್ಯೆ ಹೆಚ್ಚಿಸುವಲ್ಲಿ ನಮ್ಮ ಸರಕಾರ ಕಾರ್ಯ ಪ್ರವೃತ್ತವಾಗಿದೆ. ಜನರ ಬೆಂಬಲ ಧನಾತ್ಮಕವಾಗಿದೆ. ಜನರು ಉಪ ಚುನಾವಣೆಯಲ್ಲಿ ಸಮರ್ಥಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.
- - -
ದಾವಣಗೆರೆ: ಜನರ ನಂಬಿಕೆಗೆ ತಕ್ಕಂತೆ ಕೆಲಸ ಮಾಡುವುದು ನನ್ನ ಮೊದಲ ಆದ್ಯತೆ. ಹಿರಿಯರ ಆಶೀರ್ವಾದ ಹಾಗೂ ಯುವಕರ ಬೆಂಬಲದಿಂದ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವುದು ನನ್ನ ಗುರಿಯಾಗಿದೆ ಎಂದು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.ದಕ್ಷಿಣ ಕ್ಷೇತ್ರದ ಶೇಖರಪ್ಪ ನಗರ, ಆರ್ಎಂಸಿ ಲಿಂಕ್ ರಸ್ತೆ, ವಿನಾಯಕ ನಗರ, ದೇವರಾಜ ಅರಸು ಬಡಾವಣೆ, ಬಂಬೂಬಜಾರ್, ಚೌಕಿಪೇಟೆ ರಸ್ತೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ನೀಡುವುದಾಗಿ ಭರವಸೆ ನೀಡಿದರು.
ಸ್ಥಳೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.- - -
- - -
ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆ ತಾ. ದಕ್ಷಿಣ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.