ಸುಭದ್ರ ಭಾರತ ನಿರ್ಮಾಣಕ್ಕೆ ಮತದಾನ ಮಾಡಿ: ರೂಪಾ

KannadaprabhaNewsNetwork |  
Published : Jan 26, 2024, 01:46 AM IST
ಚಿತ್ರಶೀರ್ಷಿಕೆ25ಎಂಎಲ್ ಕೆ1ಮೊಳಕಾಲ್ಮುರು ಇಲ್ಲಿನ ಪ್ರಥಮದರ್ಜೆ ಕಾಲೇಜಿನಲ್ಲಿ  ನಡೆದ ರಾಷ್ಟ್ರೀಯ ಮತದಾರ ದಿನಾಚರಣೆಕಾರ್ಯಕ್ರಮವನ್ನು ತಹಸೀಲ್ದಾರ್ ಎಂ.ವಿ.ರೂಪ ಉದ್ಘಾಟಿಸಿದರು. | Kannada Prabha

ಸಾರಾಂಶ

ಸುಭದ್ರ ಭಾರತ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಮತದಾನ ಕಾರ್ಯದಲ್ಲಿ ಭಾಗವಹಿಸಿ ಕಡ್ಡಾಯವಾಗಿ ಮತದಾನ ಮಾಡಬೇಕು.

ಮೊಳಕಾಲ್ಮುರು: ಸುಭದ್ರ ಭಾರತ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಮತದಾನ ಕಾರ್ಯದಲ್ಲಿ ಭಾಗವಹಿಸಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ತಹಸೀಲ್ದಾರ್ ಎಂ.ವಿ.ರೂಪ ಹೇಳಿದರು.

ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ಅಭಿಯೋಜನೆ ಇಲಾಖೆ, ವಕೀಲರ ಸಂಘ, ತಾಲೂಕು ಆಡಳಿತ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯಬೇಕಾದರೆ ಪ್ರತಿಯೊಬ್ಬ ಯುವಕರು ಮತದಾನ ಕಾರ್ಯದಲ್ಲಿ ಪಾಲ್ಗೊಳ್ಳಬೇಕು. ಇದರಿಂದ ದೇಶದ ಸಾರ್ವಭೌಮತ್ವ ಸಾರುವ ಜತೆಗೆ ಬಲಿಷ್ಟ ರಾಷ್ಟ್ರ ಕಟ್ಟುವಲ್ಲಿ ಸಹಕಾರಿಯಾಗಬೇಕು. ಮತದಾನ ಪ್ರತಿಯೊಬ್ಬರ ಸಂವಿಧಾನ ಬದ್ಧ ಹಕ್ಕಾಗಿದ್ದು, ಮತದಾನದ ಕುರಿತು ಅರಿವನ್ನು ಪಡೆದುಕೊಳ್ಳಬೇಕು. 18 ತುಂಬಿದ ಪ್ರತಿಯೊಬ್ಬರು ಮತ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸುವ ಮೂಲಕ ಮತದಾನ ಕಾರ್ಯದಲ್ಲಿ ಭಾಗಿಯಾಗಿ ಮತದಾನ ಮಾಡಬೇಕೆಂದು ತಿಳಿಸಿದರು.

ಹಿರಿಯ ವಕೀಲ ರಾಜಶೇಖರ್ ನಾಯಕ ಮಾತನಾಡಿ, ಭಾರತ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗುವಂತೆ ಪ್ರತಿಯೊಬ್ಬರಿಗೂ ಮತದಾನ ಮಾಡುವಂತ ಹಕ್ಕು ನೀಡಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳಾಗಿದ್ದು, ಪ್ರಜೆ ಮತ ನೀಡಿ ದೇಶವನ್ನು ಬಲಿಷ್ಟವಾಗಿ ಕಟ್ಟುವಂತ ಶಕ್ತಿ ಇದೆ. ಮತದಾನದಲ್ಲಿ ಭಾಗಿಯಾಗುವ ಮೂಲಕ ಉತ್ತಮ ಚಿಂತನೆಗಳು ಇರುವಂತ ರಾಜಕಾರಣಿಗಳನ್ನು ಆಯ್ಕೆ ಮಾಡಬೇಕು ಎಂದರು.

ಸಹಾಯಕ ಪ್ರಾಧ್ಯಾಪಕ ಡಾ.ಯೋಗಾನಂದ ಮಾತನಾಡಿ, ದೇಶ ಅಭಿವೃದ್ಧಿಯಾಗಬೇಕಾದರೆ ಉತ್ತಮ ಜನಪ್ರತಿನಿಧಿಗಳ ಅಗತ್ಯವಾಗಿದೆ. 18 ತುಂಬಿದ ವರ್ಷ ಮೀರಿದ ಪ್ರತಿಯೊಬ್ಬ ಯುವಕರು ಮತ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಿ ಮತದಾನದಲ್ಲಿ ಭಾಗಿಯಾಗಬೇಕು. ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಿ ಪ್ರಜಾ ಪ್ರಭುತ್ವದ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದಿದ್ದಾರೆ.

ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸೂರಯ್ಯ, ತಾಪಂ ಇ.ಒ.ಪ್ರಕಾಶ, ಪಶು ಇಲಾಖೆಯ ಸಹಾಯಕ ನಿರ್ಧೆಶಕ ಡಾ.ರಂಗಪ್ಪ,ಸರ್ಕಾರಿ ವಕೀಲರಾದ ಮಹಮದ್ ಶಂಶೀರ್ ಆಲಿ, ವಕೀಲರ ಸಂಘದ ಅಧ್ಯಕ್ಷ ಆರ್.ಆನಂದ್, ಕಾರ್ಯದರ್ಶಿ ಕುಮಾರಪ್ಪ, ಉಪಾಧ್ಯಕ್ಷ ಜಿ.ಮಂಜುನಾಥ, ಹಿರಿಯ ವಕೀಲರಾದ ಎಂ.ಎನ್.ವಿಜಯ ಲಕ್ಷ್ಮಿ, ರಾಮಾಂಜಿನೇಯ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ ತೆಬಿಯಾ ರೋಸಿಯಾ ಹೂ ವೈಭವ!
ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್‌