ಕನ್ನಡ ಪ್ರಭ ವಾರ್ತೆ ಹೊನ್ನಾಳಿ
ಉಪವಿಭಾಗಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ವಿ.ಅಭಿಷೇಕ್ ಅವರು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ನಾಳಿನ ಉತ್ತಮ ಭವಿಷ್ಯ ನಿರ್ಮಾಣಕ್ಕಾಗಿ ತಪ್ಪದೇ ಎಲ್ಲ ಅರ್ಹ ಮತದಾರರು ಮತದಾನ ಮಾಡಬೇಕು. ಪ್ರಜೆಗಳಿಗೆ ದತ್ತವಾದ ಸಾಂವಿಧಾನಾತ್ಮಕ ಹಕ್ಕು ಮತದಾನವಾಗಿದೆ. ಇದನ್ನು ಎಲ್ಲರೂ ದೇಶದ ಹಿತಕ್ಕಾಗಿ ಚಲಾಯಿಸಬೇಕು ಎಂದು ಹೇಳಿದರು.
ಮತದಾನದ ಮಹತ್ವದ ಬಗ್ಗೆ ಈಗಾಗಲೇ ತಾಲೂಕಿನ ಹಲವಾರು ಗ್ರಾಮಗಳಲ್ಲಿ ಜಾಥಾ, ಬೈಕ್ ರ್ಯಾಲಿಗಳ ಮೂಲಕ ಜಾಗೃತಿ ಮೂಡಿಸುವ ಕೆಲಸಗಳನ್ನು ಮಾಡಲಾಗುತ್ತಿದೆ. ಮತದಾನ ನಿರ್ಲಕ್ಷಿಸದೇ, ಎಲ್ಲರೂ ಮತದಾನ ಮಾಡುವ ಮೂಲಕ ಶೇ.100ಕ್ಕೆ 100 ಮಾತದಾನ ಗುರಿ ಸಾಧಿಸಬೇಕು ಎಂದು ಮನವಿ ಮಾಡಿದರು.ಹೊನ್ನಾಳಿ ತಹಸೀಲ್ದಾರ್ ಪುರಂದರ ಹೆಗಡೆ ಅವರು ಕಾಲೇಜಿನ ವಿದ್ಯಾರ್ಥಿಗಳನ್ನೂ ಒಳಗೊಂಡಂತೆ ಎಲ್ಲರಿಗೂ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಮತದಾನ ಪ್ರಕ್ರಿಯೆಯಲ್ಲಿ ಅತಿ ಹೆಚ್ಚು ಮತದಾರರು ಪಾಲ್ಗೊಳ್ಳುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿದಂತಾಗುವುದು ಎಂದು ಹೇಳಿದರು.
- - - -18ಎಚ್.ಎಲ್.ಐ1:
ಹೊನ್ನಾಳಿಯಲ್ಲಿ ಗುರುವಾರ ಪಟ್ಟಣದ ದೇವನಾಯ್ಕನಹಳ್ಳಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಾಗೂ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಮತದಾನ ಜಾಗೃತಿ ಸ್ವೀಪ್ ಕಾರ್ಯಕ್ರಮ ನಡೆಯಿತು.