ಕನ್ನಡಪ್ರಭ ವಾರ್ತೆ, ದಾವಣಗೆರೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ನಾಯಕರನ್ನು ನಾವೇ ಆಯ್ಕೆ ಮಾಡಿಕೊಳ್ಳಲು ಅಧಿಕಾರವಿದೆ. ನಾಯಕನ ಆಯ್ಕೆ ಮಾಡಲು ಮೇ 7ರಂದು ತಪ್ಪದೇ ಮತಗಟ್ಟೆಗೆ ಬಂದು ಮತದಾನ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷೆ ರಾಜೇಶ್ವರಿ ಎನ್. ಹೆಗಡೆ ಹೇಳಿದರು.
ಜಿಲ್ಲೆಯಲ್ಲಿ ಶೇ.100ರಷ್ಟು ಮತದಾನ ಆಗುವುದೇ ಇಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಮತದಾನವಾಗಿದೆ. ಚುನಾವಣೆಗಳಲ್ಲಿ ಮಹಿಳೆಯರು ಹೆಚ್ಚು ಮತದಾನ ಮಾಡುತ್ತಿದ್ದಾರೆ. ಪ್ರತಿಯೊಬ್ಬ ಭಾರತೀಯರು ತಮ್ಮ ಮತಹಕ್ಕನ್ನು ಚಲಾಯಿಸಬೇಕು ಎಂದರು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಮಾತನಾಡಿ, ವಿಶ್ವದಲ್ಲಿ 195 ದೇಶಗಳಿವೆ, ಅದರಲ್ಲಿ ಭಾರತ ಅತಿ ದೊಡ್ಡ, ಶಕ್ತಿಯುತ ಪ್ರಜಾಪ್ರಭುತ್ವ ಹೊಂದಿರುವ ದೇಶ. ಈ ಪ್ರಜಾಪ್ರಭುತ್ವವನ್ನು ನೀಡಿದ್ದು ಜನರೇ ಆಗಿದ್ದಾರೆ. ಸಂರಕ್ಷಣೆ ಮಾಡುವಂತಹ ಶಕ್ತಿ ಸಂವಿಧಾನಕ್ಕಿದೆ ಎಂದರು.ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ ಬಿ. ಇಟ್ನಾಳ್ ಮಾತನಾಡಿದರು. ಮಹಿಳಾ ದಿನಾಚರಣೆ ಪ್ರಯುಕ್ತ ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್. ಬಳ್ಳಾರಿ, ಪಾಲಿಕೆ ಆಯುಕ್ತರಾದ ರೇಣುಕಾ ಅವರಿಗೆ ಸನ್ಮಾನಿಸಲಾಯಿತು. ಮರಣ ಹೊಂದಿದ ವಕೀಲ ಕೊಟ್ರಯ್ಯ ಅವರ ಪತ್ನಿ ಪುಪ್ಪಾಲತಾ ಅವರಿಗೆ ₹1 ಲಕ್ಷದ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.
- - - -8ಕೆಡಿವಿಜಿ32ಃ:
ದಾವಣಗೆರೆ ಜಿಲ್ಲಾ ವಕೀಲರ ಭವನದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮವನ್ನು ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಉದ್ಘಾಟಿಸಿದರು.