ಮತಕಳ್ಳತನ: ಕಾಂಗ್ರೆಸ್‌ನಿಂದ ಸಹಿ ಸಂಗ್ರಹ ಅಭಿಯಾನ

KannadaprabhaNewsNetwork |  
Published : Oct 05, 2025, 01:01 AM IST
ೂ4ೀ444 | Kannada Prabha

ಸಾರಾಂಶ

ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಗರದ ಬಿ.ಜಿ. ಪಾಳ್ಯ ವೃತ್ತದಲ್ಲಿ ನಡೆದ ಸಹಿ ಸಂಗ್ರಹ ಅಭಿಯಾನ

ಕನ್ನಡಪ್ರಭ ವಾರ್ತೆ, ತುಮಕೂರುಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಮತಕಳ್ಳತನದ ಮೂಲಕ ಬಿಜೆಪಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದೆ. ವಿವಿಧ ಕ್ಷೇತ್ರಗಳಲ್ಲಿ ಮತಕಳ್ಳತನ ನಡೆದಿರುವ ಬಗ್ಗೆ ನಮ್ಮ ನಾಯಕರಾದ ರಾಹುಲ್‌ ಗಾಂಧಿಯವರು ಸಾಕ್ಷಿ ಸಮೇತ ಸಾಬೀತು ಮಾಡಿದ್ದಾರೆ. ಮತಕಳ್ಳತನ ಮಾಡಿ ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ದ್ರೋಹಮಾಡಿದೆ ಎಂದು ಎಐಸಿಸಿ ಕಾರ್ಯದರ್ಶಿ, ಜಿಲ್ಲಾ ಕಾಂಗ್ರೆಸ್‌ ಉಸ್ತುವಾರಿ ಮಯೂರ ಜಯಕುಮಾರ್ ಆರೋಪಿಸಿದರು.ಮತಕಳ್ಳತನದ ವಿರುದ್ಧ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಗರದ ಬಿ.ಜಿ. ಪಾಳ್ಯ ವೃತ್ತದಲ್ಲಿ ನಡೆದ ಸಹಿ ಸಂಗ್ರಹ ಅಭಿಯಾನದ ಪೋಸ್ಟರ್‌ನಲ್ಲಿ ತಾವು ಸಹಿ ಮಾಡಿ, ಅಭಿಯಾನಕ್ಕೆ ಚಾಲನೆ ನೀಡಿದ ಅವರು, ಮತಕಳ್ಳತನದ ವಿರುದ್ಧ ರಾಹುಲ್‌ಗಾಂಧಿ ದೇಶಾದ್ಯಂತ ಹೋರಾಟ ನಡೆಸುತ್ತಿದ್ದಾರೆ. ಅವರ ಹೋರಾಟಕ್ಕೆ ಎಲ್ಲೆಡೆ ವ್ಯಾಪಕ ಬೆಂಬಲ ದೊರಕಿದೆ. ಮತಕಳ್ಳತನದ ಮೂಲಕ ಚುನಾವಣೆ ಗೆದ್ದು ಹಿಂಬಾಗಿಲಿನಿಂದ ಅಧಿಕಾರ ಪಡೆದಿರುವ ಬಿಜೆಪಿಯ ದುಷ್ಟಕೃತ್ಯಕ್ಕೆ ದೇಶದ ಜನತಕ್ಕ ಪಾಠ ಕಲಿಸುತ್ತಾರೆ ಎಂದರು.ಚುನಾವಣೆಗಳಲ್ಲಿ ಮತಕಳ್ಳನ ಸಂವಿಧಾನದ ಆಶಯಕ್ಕೆ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗುತ್ತದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಮುಂದಿನ ಚುನಾವಣೆಗಳಲ್ಲಿ ಮತಕಳ್ಳತನಕ್ಕೆ ಅವಕಾಶ ಆಗದಂತೆ ಚುನಾವಣಾ ಆಯೋಗ ಕಟ್ಟೆಚ್ಚರ ವಹಿಸಬೇಕು. ಮತಕಳ್ಳತನದ ವಿರುದ್ಧ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಜನಜಾಗೃತಿ ಮೂಡಿಸುತ್ತಿದೆ, ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ ಎಂದು ಮಯೂರಜಯಕುಮಾರ್ ಹೇಳಿದರು.ಮತಕಳ್ಳತನ ವಿರುದ್ಧ ನಗರದಲ್ಲಿ ಸಹಿ ಸಂಗ್ರಹ ಅಭಿಯಾನ ಆಯೋಜಿಸಿದ್ದ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಇಕ್ಬಾಲ್‌ ಅಹ್ಮದ್ ಮಾತನಾಡಿದರು. ಮಾಜಿ ಶಾಸಕ ಡಾ.ರಫಿಕ್‌ಅಹ್ಮದ್, ಕೆಪಿಸಿಸಿ ಉಪಾಧ್ಯಕ್ಷ ಮುರಳಿಧರ ಹಾಲಪ್ಪ ಸೇರಿದಂತೆಕಾಂಗ್ರೆಸ್‌ನ ವಿವಿಧ ಘಟಕಗಳಪದಾಧಿಕಾರಿಗಳು, ನಗರಪಾಲಿಕೆ ಮಾಜಿ ಸದಸ್ಯರು, ಮುಖಂಡರುಅಭಿಯಾನದಲ್ಲಿ ಭಾಗವಹಿಸಿ ಸಾರ್ವಜನಿಕರಿಂದಸಹಿ ಸಂಗ್ರಹ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ