ನಗರಸಭಾ ಸದಸ್ಯರಿಂದ ಸುರೇಶ್‌ ಪರ ಮತಯಾಚನೆ

KannadaprabhaNewsNetwork |  
Published : Apr 21, 2024, 02:18 AM IST
ಕೆ ಕೆ ಪಿ ಸುದ್ದಿ 02:ನಗರದ ಹದಿನೈದನೇ ವಾರ್ಡಿನಲ್ಲಿ ಸಂಸದ ಡಿ. ಕೆ ಸುರೇಶ್ ಪರವಾಗಿ ನಗರಸಭಾ ಸದಸ್ಯೆ ಸರಳಾ ಶ್ರೀನಿವಾಸ್ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಲಾಯಿತು. | Kannada Prabha

ಸಾರಾಂಶ

ಕನಕಪುರ: ನಗರದ ಹಲಸಿನಮರದೊಡ್ಡಿ ವ್ಯಾಪ್ತಿಯ ವಾರ್ಡ್ ನಂ 15ರ ನಗರಸಭಾ ಸದಸ್ಯೆ ಸರಳಾ ಶ್ರೀನಿವಾಸ್ ನೇತೃತ್ವದಲ್ಲಿ ಸಂಸದ ಡಿ.ಕೆ.ಸುರೇಶ್ ಪರ ಪಕ್ಷದ ಕಾರ್ಯಕರ್ತರು ಮತಯಾಚಿಸಿದರು.

ಕನಕಪುರ: ನಗರದ ಹಲಸಿನಮರದೊಡ್ಡಿ ವ್ಯಾಪ್ತಿಯ ವಾರ್ಡ್ ನಂ 15ರ ನಗರಸಭಾ ಸದಸ್ಯೆ ಸರಳಾ ಶ್ರೀನಿವಾಸ್ ನೇತೃತ್ವದಲ್ಲಿ ಸಂಸದ ಡಿ.ಕೆ.ಸುರೇಶ್ ಪರ ಪಕ್ಷದ ಕಾರ್ಯಕರ್ತರು ಮತಯಾಚಿಸಿದರು.

ತಮ್ಮ ವಾರ್ಡ್ ವ್ಯಾಪ್ತಿಯಲ್ಲಿನ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಜನತೆಗೆ ನೀಡುತ್ತಿರುವ ಐದು ಗ್ಯಾರಂಟಿ ಯೋಜನೆಗಳು ಹಾಗೂ ಸಂಸದ ಸುರೇಶ್ ರವರು ಕಳೆದ ಹತ್ತು ವರ್ಷಗಳಲ್ಲಿ ತಮ್ಮ ಸಂಸದರ ಅನುದಾನದಲ್ಲಿ ನಗರಕ್ಕೆ ಮಾಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಕರಪತ್ರ ಹಂಚುವ ಮೂಲಕ ಮತ್ತೊಮ್ಮೆ ಡಿ. ಕೆ.ಸುರೇಶ್ ಅವರಿಗೆ ಜನರ ಸೇವೆ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಕಾಂಗ್ರೆಸ್‌ ಮುಖಂಡ ಶ್ರೀನಿವಾಸ್ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಡಿ.ಕೆ.ಸುರೇಶ್ ಅವರು ಸಂಸದರಾಗಿ ಆಯ್ಕಯಾಗಬೇಕು. ಆ ನಿಟ್ಟಿನಲ್ಲಿ ಈ ಭಾಗದ ಮುಖಂಡರು ಪ್ರತಿ ಮನೆ ಮನೆ ಗಳಿಗೆ ತೆರಳಿ ಮತಯಾಚನೆ ಮಾಡಿ ಡಿ.ಕೆ. ಸುರೇಶ್ ಅವರು ಅತಿ ಹೆಚ್ಚು ಮತಗಳ ಅಂತರದಿಂದ ಆಯ್ಕೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಅದನ್ನು ಅರಿತು ಕೆಲಸ ಮಾಡೋಣ ಎಂದರು.

ಸಂಸದ ಡಿ.ಕೆ.ಸುರೇಶ್ ಅವರು ಕಳೆದ 10 ವರ್ಷದ ಅವಧಿಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಸ್ಥಳೀಯವಾಗಿ ಜನರಿಗೆ ತಮ್ಮ ಸಮಸ್ಯೆಗಳನ್ನ ಬಗೆ ಹರಿಸಿಕೊಳ್ಳಲು ಸಿಗುವ ಏಕೈಕ ಅಭ್ಯರ್ಥಿ ಎಂದರೆ ಅದು ಡಿ.ಕೆ.ಸುರೇಶ್ ಅವರು ಮಾತ್ರ ಈ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರೇ ಅತಿ ಹೆಚ್ಚು ಮತಗಳಿಂದ ಆಯ್ಕೆಯಾಗುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದರು.

ಯುವ ಕಾಂಗ್ರೆಸ್ ಹರೀಶ್, ಮಂಜುನಾಥ್, ನಂದೀಶ್ ಮಹದೇವ್, ರಮೇಶ್, ಶ್ವೇತಾ, ಕಾರ್ಯಕರ್ತರು ಉಪಸ್ಥಿತರಿದ್ದರು. ಕೆ ಕೆ ಪಿ ಸುದ್ದಿ 02:ಕನಕಪುರದಲ್ಲಿ ಸಂಸದ ಡಿ.ಕೆ.ಸುರೇಶ್ ಪರ ನಗರಸಭಾ ಸದಸ್ಯೆ ಸರಳಾ ಶ್ರೀನಿವಾಸ್ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ