ಭಾವನಾತ್ಮಕ ಆವೇಶಕ್ಕೆ ಬಲಿಯಾಗದೇ ವಿವೇಕಶಾಲಿಗಳಾಗಿ ಮತದಾನ ಮಾಡಿ

KannadaprabhaNewsNetwork |  
Published : May 06, 2024, 12:33 AM IST
ಬಳ್ಳಾರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿದ ಪ್ರಗತಿಪರ ಚಿಂತಕರು ಹಾಗೂ ಸಾಹಿತಿಗಳು ಲೋಕಸಭಾ ಚುನಾವಣೆಯಲ್ಲಿ ವಿವೇಚನೆಯಿಂದ ಹಕ್ಕು ಚಲಾಯಿಸುವಂತೆ ಮನವಿ ಮಾಡಿದರು.  | Kannada Prabha

ಸಾರಾಂಶ

ದೇಶವನ್ನು ಸಮಗ್ರತೆ, ಐಕ್ಯತೆ, ಸೌಹಾರ್ದದಿಂದ ಕಟ್ಟುವ ಅಗತ್ಯವಿದೆ. ಕೋಮು ದ್ವೇಷವನ್ನು ಹರಡಿಸುವ ಪಕ್ಷವನ್ನು ಮತದಾರರು ಈ ಚುನಾವಣೆಯಲ್ಲಿ ತಿರಸ್ಕರಿಸಬೇಕು.

ಬಳ್ಳಾರಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಭಾವನಾತ್ಮಕ ಆವೇಶಗಳಿಗೆ ಬಲಿಯಾಗದೇ ವಿವೇಕಶಾಲಿಗಳಾಗಿ ಹಕ್ಕು ಚಲಾಯಿಸಬೇಕು ಎಂದು ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್‌.ಜಿ. ಸಿದ್ದರಾಮಯ್ಯ ಹೇಳಿದರು.ನಗರದ ಖಾಸಗಿ ಹೊಟೇಲ್‌ ಸಭಾಂಗಣದಲ್ಲಿ ಜಾಗೃತಿ ನಾಗರಿಕರು ಕರ್ನಾಟಕದಿಂದ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ಸಮಾಜವನ್ನು ಧರ್ಮ, ಭಾಷೆ, ಜಾತಿಗಳ ಹೆಸರಿನಲ್ಲಿ ಒಡೆಯುವುದನ್ನು ತಡೆಗಟ್ಟುವ ಅನಿವಾರ್ಯತೆಯಿದೆ ಎಂದರು.

ದೇಶವನ್ನು ಸಮಗ್ರತೆ, ಐಕ್ಯತೆ, ಸೌಹಾರ್ದದಿಂದ ಕಟ್ಟುವ ಅಗತ್ಯವಿದೆ. ಕೋಮು ದ್ವೇಷವನ್ನು ಹರಡಿಸುವ ಪಕ್ಷವನ್ನು ಮತದಾರರು ಈ ಚುನಾವಣೆಯಲ್ಲಿ ತಿರಸ್ಕರಿಸಬೇಕು. ಇಂದಿನ ಚುನಾವಣೆ ಪ್ರಜಾಪ್ರಭುತ್ವದ ಅಳಿವು ಉಳಿವಿನ ಮತ್ತು ಸಂವಿಧಾನದ ಸಂರಕ್ಷಣೆಯ ಚುನಾವಣೆಯಾಗಿದ್ದು ದ್ವೇಷ ರಾಜಕಾರಣ ತುಂಬಿ ತುಳುಕುತ್ತಿರುವ ಈ ಹೊತ್ತಿನಲ್ಲಿಇವೆರಡೂ ಅಪಾಯದ ಸ್ಥಿತಿಯಲ್ಲಿವೆ. ಚುನಾವಣೆ ದೇಶದ ಗಣತಂತ್ರ ವ್ಯವಸ್ಥೆ ಉಳಿಸುವ, ಬೆಳೆಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರವಹಿಸಲಿದೆ. ಯಾವುದೇ ಭಾವನಾತ್ಮಕ ಅವೇಶಗಳಿಗೆ ಬಲಿಯಾಗದೇ ವಿವೇಕಶಾಲಿಗಳಾಗಿ ಮತ ಚಲಾಯಿಸಬೇಕು ಎಂದು ಮನವಿ ಮಾಡಿದರು.

ಪ್ರಧಾನಿ ಬರೀ ಬಾಯಿ ಮಾತಿನಲ್ಲಿ ಮಹಿಳಾ ರಕ್ಷಣೆಯ ಮಾತುಗಳನ್ನಾಡುತ್ತಾರೆಯೇ ವಿನಃ ಮಹಿಳಾ ರಕ್ಷಣೆ ಸಮಯದಲ್ಲಿ ಕಾಳಜಿ ತೋರಿಸಲಿಲ್ಲ. ಕಳೆದ ಒಂದು ದಶಕದಲ್ಲಿ ದೇಶದಲ್ಲಿ ನಡೆದಿರುವ ನಾನಾ ಪ್ರಕರಣಗಳು ಸಾಕ್ಷಿಯಾಗಿವೆ. ಮಣಿಪುರದಲ್ಲಿ ಹಾಡು ಹಗಲು ಸಾವಿರಾರು ಜನ ಮಹಿಳೆಯರನ್ನು ಬೆತ್ತಲೆಗೊಳಿಸಿ, ಲೈಂಗಿಕ ದೌರ್ಜನ್ಯ ಅತ್ಯಾಚಾರ ನಡೆಸಿ ಕೊಲೆಗೈದರೂ ಯಾವುದೇ ಕ್ರಮಗಳಾಗಲಿಲ್ಲ. ಕುಸ್ತಿಪಟುಗಳ ತಮ್ಮ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ವಿರುದ್ಧ ನ್ಯಾಯ ಕೇಳಿದರೆ ಇವರು ನಿಂತಿದ್ದು ಯಾರ ಪರ ಎಂದು ಪ್ರಶ್ನಿಸಿದರು.

ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ವಿಮಲಾ ಕೆ.ಎಸ್‌., ಪ್ರಗತಿಪರ ಚಿಂತಕಿ ಡಾ.ವಸುಂಧರಾ ಭೂಪಲ್‌, ಸಾಹಿತಿ ಜಾಣಗೆರೆ ವೆಂಕಟರಾಮ, ಕಾಂಗ್ರೆಸ್ ಮುಖಂಡ ವಿಜಯ್‌ ಕುಮಾರ್‌ ಸಂಗನಕಲ್ಲು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಮ್ಮನ್ನು ನಾವು ಅರಿತುಕೊಳ್ಳುವುದೇ ಆಂತರಿಕ ನಡುಗೆ
ಹೆತ್ತವರನ್ನು ಕಡೆಗಣಿಸುವುದು ಅಮಾನವೀಯತೆ