ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳಗಂಗೋತ್ರಿಯಲ್ಲಿರುವ ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದ ಮುಂಭಾಗ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಅಭಿಯಾನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಾಗೃತಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಕುಲಸಚಿವ ಕೆ. ರಾಜು ಮೊಗವೀರ, ಭಾರತದಲ್ಲಿ ಸುಮಾರು 96.8 ಕೋಟಿ ಅರ್ಹ ಮತದಾರರಿದ್ದಾರೆ. 19.74 ಕೋಟಿ ಯುವ ಮತದಾರರಿದ್ದಾರೆ. ಆದರೆ, ಇವರಲ್ಲಿ ಕೇವಲ 60% ಅಥವಾ 70% ಜನ ಮಾತ್ರ ಮತ ಚಲಾಯಿಸುತ್ತಾರೆ. ಪ್ರಜಾಪ್ರಭುತ್ವವನ್ನು ಬಲಪಡಿಸಲು ನಾವೆಲ್ಲರೂ ಮತ ಚಲಾಯಿಸಬೇಕು ಎಂದು ಕರೆ ನೀಡಿದರು.
ಕುಲಸಚಿವ (ಪರೀಕ್ಷಾಂಗ) ಡಾ.ಎಚ್. ದೇವೆಂದ್ರಪ್ಪ, ಹಣಕಾಸು ಅಧಿಕಾರಿ ಡಾ.ವೈ. ಸಂಗಪ್ಪ, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕ ಪ್ರೊ. ಗಣೇಶ್ ಸಂಜೀವ್, ಐಕ್ಯೂಎಸಿ ನಿರ್ದೇಶಕಿ ಪ್ರೊ. ಮೊನಿಕಾ ಸದಾನಂದ, ಪುರುಷರ ವಸತಿ ಗೃಹದ ಮೇಲ್ವಿಚಾರಕ ಡಾ. ಗೋವಿಂದ ರಾಜ್ ಹಾಗೂ ಮಹಿಳಾ ವಸತಿಗೃಹದ ಮೇಲ್ವಿಚಾರಕ ಡಾ. ಚಂದ್ರ ಎಂ ಪಾಲ್ಗೊಂಡಿದ್ದರು.ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ ಅಭಿಯಾನದಲ್ಲಿ ಪಾಲ್ಗೊಂಡರು.