ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಮ್ಮ ನಿರೀಕ್ಷೆಗೂ ಮೀರಿ ನಮಗೆ ಮತ ಬರುವ ವಿಶ್ವಾಸ ಇದೆ. ಗ್ಯಾರಂಟಿಗಳ ಬಗ್ಗೆ ಮತದಾರನಿಗೆ ಮನವರಿಕೆ ಮಾಡಿಕೊಂಡಿದ್ದೆವು. ಆ ವಿಶ್ವಾಸದಿಂದಲೇ, ಹೆಮ್ಮೆಯಿಂದಲೇ ಮತ ಕೇಳಿದ್ದೆವು. ಇದು ನಮ್ಮನ್ನು ಗೆಲುವಿಗೆ ಕೊಂಡೊಯ್ಯುತ್ತದೆ ಎಂದರು.
ಈ ಬಾರಿಯ ಮತದಾನ ದಾಖಲೆಯಾಗಿದೆ. ಈ ಮತದಾನ ಹೆಚ್ಚಳಕ್ಕೆ ರಾಜ್ಯ ಸರ್ಕಾರದ ಗ್ಯಾರಂಟಿಗಳು ಹಾಗೂ ಕೇಂದ್ರ ಕಾಂಗ್ರೆಸ್ಸಿನ ಗ್ಯಾರಂಟಿಗಳ ಆಶ್ವಾಸನೆಗಳು ಕೂಡ ಕಾರಣವಾಗಿವೆ. ಮತದಾರ ಮತ್ತು ಕಾಂಗ್ರೆಸ್ ನಡುವೆ ಬಾಂಧವ್ಯದ ಬೆಸುಗೆಯಾಗಿದೆ. ಈ ಎಲ್ಲಾ ಕಾರಣಗಳಿಂದ ದೇಶದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಅತ್ಯಂತ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಮಾಹಿತಿ ನೀಡಿದರು.ಬಿಜೆಪಿಯ ಬಣ್ಣ ಈ ಚುನಾವಣೆಯಲ್ಲಿ ಬಯಲಾಗಿದೆ. ಧರ್ಮ ಹಾಗೂ ಭಾವನೆ ಆಧಾರದಲ್ಲಿ ಚುನಾವಣೆಗಳು ನಡೆಯುವುದಿಲ್ಲ ಎಂಬುವುದು ಸಾಬೀತಾಗಿದೆ. ಬಡವರಿಗೆ ಬೇಕಾಗಿರುವುದು ಬದುಕು, ನಮ್ಮದು ಜೀವಪರ ಯೋಜನೆಗಳು. ಗ್ಯಾರಂಟಿಗಳಿಂದ ಯಾರೂ ಹಾಳಾಗುವುದಿಲ್ಲ. ದೇಶದ ಆರ್ಥಿಕತೆಯು ಕುಸಿತವಾಗುವುದಿಲ್ಲ. ಗ್ಯಾರಂಟಿಯಿಂದಾಗಿ ಹಣ ಮತ್ತೆ ಸಮುದಾಯದಲ್ಲಿಯೇ ವೆಚ್ಚಾಗುವುದರಿಂದ ಆರ್ಥಿಕತೆ ಬೆಳೆಯುತ್ತದೆ. ಈ ಸೂಕ್ಷ್ಮತೆ ಬಿಜೆಪಿಯರಿಗೆ ಅರ್ಥವಾಗದೆ ಗ್ಯಾರಂಟಿಯಿಂದ ಆರ್ಥಿಕತೆ ನಾಶವಾಗುತ್ತದೆ ಎಂದು ಅಪಪ್ರಚಾರ ಮಾಡುತ್ತಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಆಯನೂರು ಮಂಜುನಾಥ್, ಆರ್.ಎಂ. ಮಂಜುನಾಥ ಗೌಡ, ಎಂ. ಶ್ರೀಕಾಂತ್, ಕಲಗೋಡು ರತ್ನಾಕರ್, ಡಾ.ಶ್ರೀನಿವಾಸ ಕರಿಯಣ್ಣ, ಎಸ್.ಕೆ. ಮರಿಯಪ್ಪ, ಕಲೀಂ ಪಾಶಾ, ಜಿ.ಡಿ.ಮಂಜುನಾಥ್, ವೈ.ಎಚ್. ನಾಗರಾಜ್, ಎಚ್.ಪಿ. ಗಿರೀಶ್, ಎಸ್.ಪಿ. ಶೇಷಾದ್ರಿ ಇದ್ದರು.ಪ್ರತಿಯೊಬ್ಬರಿಗೂ ಅಭಿಮಾನದ ಕೃತಜ್ಞತೆಗಳು
-ಮಧು ಬಂಗಾರಪ್ಪ, ಶಿಕ್ಷಣ ಸಚಿವ.