ಕನ್ನಡಪ್ರಭ ವಾರ್ತೆ ದಾವಣಗೆರೆ
ನಾನು ನನ್ನಿಂದ ಎಂಬುವ ಹೇಳಿಕೆಗಳನ್ನು ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿಮ್ಮ ಅಧಿಕಾರ ದಾಹದಿಂದ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಕೆಟ್ಟ ಹೆಸರು ತರುತ್ತಿರುವುದನ್ನು ಮೊದಲು ನಿಲ್ಲಿಸಿ ಎಂದು ಹೇಳಿದ್ದಾರೆ.
ರಾಜ್ಯದ ಮತದಾರರು ಬಹಳಷ್ಟು ಪ್ರಬುದ್ಧರಿದ್ದು ಯಾರ ಹೇಳಿಕೆ ಆಧರಿಸಿ ಅವರು ಮತ ಹಾಕಿಲ್ಲ. ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದಂತಹ ಕಾಂಗ್ರೆಸ್ ಪಕ್ಷದ ನೀತಿ ಸಿದ್ಧಾಂತಗಳು ಹಾಗೂ ಪಕ್ಷದ ಚುನಾವಣಾ ಪ್ರಣಾಳಿಕೆಗಳಿಗೆ, ಪಕ್ಷ ನೀಡಿರುವಂತಹ ಗ್ಯಾರಂಟಿಗಳಿಗೆ ಬೆಲೆ ನೀಡಿ ಪಕ್ಷದ ಅಭ್ಯರ್ಥಿಗಳಿಗೆ ಹೆಚ್ಚಿನ ಮತ ನೀಡಿ, ಬಹುಮತ ಸರ್ಕಾರ ಅಧಿಕಾರಕ್ಕೆ ಬರುವಂತೆ ಮಾಡಿರುವುದು ಮತದಾರ ಪ್ರಭುಗಳು ಎಂಬುದನ್ನು ಮರೆಯಬೇಡಿ ಎಂದು ಸಲಹೆ ನೀಡಿದ್ದಾರೆ.ಹಿರಿಯ ನಾಯಕರುಗಳು ಈಗ ಕಚ್ಚಾಟದ ಮೂಲಕ ಗುಂಪುಗಾರಿಕೆ ಮಾಡಿ. ಪಕ್ಷದ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದು, ಅಭಿವೃದ್ಧಿಯ ಹಾದಿಯಲ್ಲಿ ಈಗಾಗಲೇ ಹಿನ್ನಡೆಯನ್ನು ಕಂಡಿರುವ ಮತದಾರರು ಬದಲಾವಣೆಯಾಗುವ ಮುನ್ನವೇ ಈ ಇಬ್ಬರು ನಾಯಕರು ಹೊಂದಾಣಿಕೆಯಲ್ಲಿ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿ ಕರ್ತವ್ಯ ನಿರ್ವಹಿಸ ಬೇಕಾಗಿದೆ ಎಂದಿದ್ದಾರೆ.
ದೇಶದ 28 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಕಾಂಗ್ರೆಸ್ ಸರ್ಕಾರ ಕೇವಲ ಮೂರು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ತೆಲಂಗಾಣ, ಕರ್ನಾಟಕ, ಹರಿಯಾಣ ರಾಜ್ಯಗಳಲ್ಲಿ ಸ್ವತಂತ್ರವಾಗಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಉಳಿವಿಗೆ ಹಾಗೂ ಮುಂಬರುವ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ರೀತಿಯಲ್ಲಿ ಅಧಿಕಾರದಲ್ಲಿರುವ ರಾಜ್ಯವಾರು ಕೆಲಸ ನಿರ್ವಹಿಸಬೇಕಾಗಿದೆ. ಪಕ್ಷ ಏನಾದರೂ ಆಗಲಿ, ನನಗೆ ಅಧಿಕಾರ ಸಿಗಲಿ ಎಂದು ವಾಮದಾರಿಯಲ್ಲಿ ಮುಂದಾದರೆ ಅದು ಪಕ್ಷಕ್ಕೆ ಮಾಡಿದ ಮೋಸವಾಗುತ್ತದೆ ಎಂದಿದ್ದಾರೆ.
ಅಧಿಕಾರಕ್ಕಾಗಿ ಕಚ್ಚಾಡುವಂತಹ ಸನ್ನಿವೇಶವನ್ನು ನೀವು ಕೈ ಬಿಡದಿದ್ದರೆ ಸರ್ಕಾರ ಅಧಿಕಾರಕ್ಕೆ ಬಂದರೂ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿರುವ ಹಿನ್ನಲೆಯಲ್ಲಿ ಪಕ್ಷಕ್ಕೆ ಮಾರಕವಾಗಬಹುದಾದ ಸನ್ನಿವೇಶಗಳಿದ್ದು, ದೇಶದಲ್ಲಿ ನೆಲೆ ಕಳೆದುಕೊಂಡಿರುವ ಕಾಂಗೈ ಪಕ್ಷದ ಉಳಿವಿಗೆ ಈಗ ನಡೆದಿರುವ ಅಧಿಕಾರದ ಕಚ್ಚಾಟ ಸರಿಯಾದುದಲ್ಲ ಎಂದಿದ್ದಾರೆ.