ಕನ್ನಡಪ್ರಭ ವಾರ್ತೆ ಸಿಂದಗಿ
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಪಂ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕಾಡಳಿತ ಹಾಗೂ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯ ಸಿಂದಗಿಗಳಿಂದ ಶುಕ್ರವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು, ಮತ ನಮ್ಮ ಹಕ್ಕು ಅದನ್ನು ಶ್ರದ್ಧೆಯಿಂದ ಮಾಡಬೇಕು. ಒಂದು ಮತ ದೇಶದ ಭದ್ರತೆಯನ್ನು ಎತ್ತಿ ಹಿಡಿಯುತ್ತದೆ. ಚುಣಾವಣೆ ದಿನವನ್ನು ರಜೆ ಎಂದು ಭಾವಿಸಿ ಬಹುತೇಕರ ಮನೆಗಳಲ್ಲಿ ಉಳಿದುಕೊಳ್ಳುತ್ತಾರೆ. ನಮ್ಮ ಜವಾಬ್ದಾರಿಯನ್ನು ನಾವೇ ಪಾಲಿಸಿ ಕಡ್ಡಾಯವಾಗಿ ಮತದಾನ ಮಾಡುವಂತೆ ಹೇಳಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಿರ್ಭೀತರಾಗಿ ಧರ್ಮ-ಜನಾಂಗ, ಜಾತಿ-ಮತ-ಭಾಷೆ ಯಾವುಕ್ಕು ಪ್ರಭಾವಿತರಾಗದೇ ಮತ ಚಲಾಯಿಸಬೇಕು. ಮತದಾನದ ಪ್ರಮಾಣ ೧೦೦ಕ್ಕೆ ೧೦೦ ಪ್ರತಿಶತವಾಗಬೇಕು. ಆ ನಿಟ್ಟಿನಲ್ಲಿ ಜನಜಾಗೃತಿ ಅವಶ್ಯವಾಗಿದೆ. ಭಾರತ ಚುಣಾವಣಾ ಆಯೋಗ ಮತದಾನವನ್ನು ಹೆಚ್ಚಿಸಲು ಎಲ್ಲ ಕ್ರಮಗಳನ್ನು ಕೈಗೊಂಡಿದೆ. ನಾಗರಿಕರು ತಮ್ಮ ಹಕ್ಕನ್ನು ಚಲಾವಣೆ ಮಾಡುವಂತೆ ತಿಳಿಸಿದರು.
ಅಭಿಯಾನದಲ್ಲಿ ಪ್ರಾಚಾರ್ಯ ಜೆ.ಸಿ.ನಂದಿಕೋಲ, ಉಪನ್ಯಾಸಕರಾದ ಸುಧಾಕರ ಚವ್ಹಾಣ, ಪ್ರಶಾಂತ ಕುಲಕರ್ಣಿ, ಆರ್.ಎ,ಹಾಲಕೇರಿ, ಸಿ.ಜಿ.ಕತ್ತಿ, ಮಹಾದೇವಿ ಹಿರೇಮಠ, ವಿದ್ಯಾ ಮೋಗಲಿ ಸೇರಿದಂತೆ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.