ಪ್ರಜಾಪ್ರಭುತ್ವ ಗಟ್ಟಿಗೊಳಿಸುವಲ್ಲಿ ಮತದಾರರು ಬಹುಮುಖ್ಯ

KannadaprabhaNewsNetwork |  
Published : Jan 26, 2026, 02:30 AM IST
ಪೋಟೊ25ಕೆಎಸಟಿ4: ಕುಷ್ಟಗಿ ನಗರದ  ತಹಸೀಲ್ದಾರ ಕಾರ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಮ್ ಎಲ್ ಪೂಜೇರಿ ಮಾತನಾಡಿದರು. | Kannada Prabha

ಸಾರಾಂಶ

ಸುಭದ್ರ ದೇಶದ ನಿರ್ಮಾಣಕ್ಕಾಗಿ ಮತದಾನ ಮಾಡುವದು ಅವಶ್ಯಕವಾಗಿದೆ

ಕುಷ್ಟಗಿ: ದೇಶದ ಪ್ರತಿಯೊಬ್ಬ ಮತದಾರರು ಮತದಾನ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್. ಪೂಜೇರಿ ಹೇಳಿದರು.

ನಗರದ ತಹಸೀಲ್ದಾರ ಕಾರ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯುವ ಮತದಾರರ ಅತ್ಯುನ್ನತ ಸ್ಥಾನದಲ್ಲಿದ್ದು, ಮತದಾನದ ಹಕ್ಕನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶೈಕ್ಷಣಿಕ ಚಿಂತಕ ಶರಣು ತೆಮ್ಮಿನಾಳ ಮಾತನಾಡಿ, ಸುಭದ್ರ ದೇಶದ ನಿರ್ಮಾಣಕ್ಕಾಗಿ ಮತದಾನ ಮಾಡುವದು ಅವಶ್ಯಕವಾಗಿದೆ. ಪ್ರತಿಯೊಬ್ಬರು ಅರ್ಹ ಮತದಾರರು ಮತದಾನ ಮಾಡಬೇಕು. ಮತದಾನದಿಂದ ವಂಚಿತರಾಗಬಾರದು ಎಂದ ಅವರು, ಪ್ರಜಾಪ್ರಭುತ್ವದ ಉಳಿವಿನಲ್ಲಿ ಯುವಕರ ಪಾತ್ರ, ದೇಶದ ಗೌರವ ವಿಷಯದ ಕುರಿತು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ ಅಶೋಕ ಶಿಗ್ಗಾಂವಿ, ಪುರಸಭೆ ಮುಖ್ಯ ಅಧಿಕಾರಿ ವೆಂಕಪ್ಪ ಬೀಳಗಿ, ಗ್ರೇಡ್ 2 ತಹಸೀಲ್ದಾರ ರಜನಿಕಾಂತ ಕೆಂಗಾರಿ, ಅಬ್ದುಲ್ ರಜಾಕ್, ಅಜಿತ್ ಜೋಷಿ, ಗೀತಾ ಅಯ್ಯಪ್ಪನವರು, ವೀಣಾ ಸೊನ್ನದ, ಬಸವರಾಜ ಚಳಗೇರಿ, ಬಿಎಲ್ಓ ಗಳು ವಿದ್ಯಾರ್ಥಿಗಳು ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿಗಳು ಸಾರ್ವಜನಿಕರು ಇದ್ದರು. ಕಂದಾಯ ಇಲಾಖೆಯ ಸಿಬ್ಬಂದಿ ಶರಣು ಹುಡೇದ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತ್ತೂರು ಬಸಿಲಿಕಾದಲ್ಲಿ ಸಂತ ಲಾರೆನ್ಸ್ ವಾರ್ಷಿಕ ಮಹೋತ್ಸವ ಆರಂಭ
ಯುವಜನತೆಗೆ ಧಾರ್ಮಿಕ ಶಿಕ್ಷಣದ ಅಗತ್ಯವಿದೆ - ಕೇಮಾರು ಶ್ರೀ