ಚಿತ್ರದುರ್ಗ: ಶ್ರೀಮಂತ ಕಂಪನಿಗಳ ಪರವಾದ ಕಾರ್ಮಿಕ ಸಂಹಿತೆಗಳ ರದ್ಧತಿಗಾಗಿ ಹಾಗೂ ಶಾಂತಿ ಸೌಹಾರ್ದತೆ, ಸಹಬಾಳ್ವೆಗಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ವಿರುದ್ಧ ಮತಚಲಾಯಿಸಲು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ನಿರ್ಣಯ ಕೈಗೊಂಡಿದೆ.
ಮೋದಿ ಸರ್ಕಾರದ ಆರ್ಥಿಕ ನೀತಿಗಳು ಕಾರ್ಮಿಕರ ಜೀವನ ಮತ್ತು ಜೀವನೋಪಾಯದ ಮೇಲೆ ವ್ಯವಸ್ಥಿತವಾಗಿ ದಾಳಿ ಮಾಡಿವೆ. ಈ ನೀತಿಗಳು ಬೃಹತ್ ಉದ್ಯೋಗ ನಷ್ಟ, ನಿರುದ್ಯೋಗಕ್ಕೆ ಕಾರಣವಾಗಿವೆ. ಬೆಲೆ ಏರಿಕೆ, ಬಡತನ ಮತ್ತು ಹಸಿವುಗಳನ್ನು ಕಟ್ಟಡ ಕಾರ್ಮಿಕರು ಅನುಭವಿಸಿದ್ದಾರೆ. ದೇಶ ಹಾಗೂ ವಿದೇಶಿ ಶ್ರೀಮಂತ ಕುಟುಂಬಗಳ ಜತೆ ಬಿಜೆಪಿ ಹಾಗೂ ಆರ್ಎಸ್ಎಸ್ ಮತ್ತು ಅದರ ವಿವಿಧ ಸಂಘಟನೆಗಳು ನಿಕಟ ಸಂಬಂಧ ಹೊಂದಿವೆ. ಅಂತಹ ಕಂಪನಿಗಳು ನೀಡುವ ಸಾವಿರಾರು ಕೋಟಿ ರುಪಾಯಿಗಳನ್ನು ಬಳಸಿ ಮೋದಿ ಸರ್ಕಾರ ಕಾರ್ಮಿಕರ ಮತ್ತು ಎಲ್ಲಾ ವರ್ಗದ ಜನರನ್ನು ವಿಭಜಿಸಲು ಮತ್ತು ಐಕ್ಯತೆಗೆ ಭಂಗ ತರಲು ಉಗ್ರ ಕೋಮು ವಿಷವನ್ನು ಹರಡುತ್ತಿದೆ. ಇದು ನಮ್ಮ ಕೆಲಸ ಮತ್ತು ಜೀವನ ಪರಿಸ್ಥಿತಿಗಳ ಮೇಲಿನ ದಾಳಿಯಾಗಿದೆ ಎಂದು ದೂರಿದರು.
ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಕಟ್ಟಡ ಮತ್ತು ಇತರೆ ನಿರ್ಮಾಣವಲಯದ ಕಾರ್ಮಿಕರು ಅಮೂಲ್ಯ ಮತವನ್ನು ಬಳಸಿ ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರದಂತೆ ತಡೆ ಒಡ್ಡಬೇಕಿದೆ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳನ್ನು ಸೋಲಿಸಬೇಕಿದೆ. ಕರ್ನಾಟಕದ ಮತ್ತು ದೇಶದ ಕಟ್ಟಡ ನಿರ್ಮಾಣ ಕಾರ್ಮಿಕರ ಭವಿಷ್ಯದ ದೃಷ್ಟಿಯಿಂದ ಇದು ತೀರ ಅವಶ್ಯವಾಗಿದೆ ಕರ್ನಾಟಕದ ಉಳಿದ ಎಲ್ಲ 27 ಕ್ಷೇತ್ರಗಳಲ್ಲಿ ಜಾತ್ಯತೀತವಾಗಿರುವ ''''''''ಇಂಡಿಯಾ'''''''' ಒಕ್ಕೂಟದ ಭಾಗವಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದರು.ಫೆಡರೇಷನ್ ಹೊಳಲ್ಕೆರೆ ತಾಲೂಕು ಕಾರ್ಯದರ್ಶಿ ಮಲ್ಲಿಕಾರ್ಜುನ, ಮಹಿಳಾ ಸಂಚಾಲಕಿ ಸಣ್ಣಮ್ಮ, ಇಸ್ಮಾಯಿಲ್, ಉಮೇಶ್, ನಾಗರಾಜು, ರಂಗಸ್ವಾಮಿ, ರಾಘವೇಂದ್ರ, ಶಿವರಾಜು, ಮುಜ್ನು ಇದ್ದರು.