ರಾಷ್ಟ್ರೀಯ ಮತದಾರ ದಿನಾಚರಣೆ
ಪ್ರಜಾಪ್ರಭುತ್ವ ರಾಷ್ಟ್ರದೊಳಗೆ ಜವಾಬ್ದಾರಿ ಪ್ರಜೆಗಳಾಗಬೇಕಾದರೆ ವಿದ್ಯಾರ್ಥಿಗಳು ಮತ್ತು ಪ್ರಜೆಗಳು ಮತದಾನದ ಬಗ್ಗೆ ತಿಳಿದು ಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡಲು ಮತಚಲಾಯಿಸಬೇಕು. ಅವರಿಗೆ ಮತದಾನದ ಅರಿವು ಅಗತ್ಯವಾಗಿದೆ ಎಂದು ಶ್ರೀ ಜಿ.ವಿ.ಗೌಡ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಲಾಜರಸ್ ಹೇಳಿದರು.
ಪಟ್ಟಣದಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆಯ ಪ್ರಯುಕ್ತ ಕಾಲೇಜಿನಲ್ಲಿ ಸಾಕ್ಷರತಾ ಮತದಾರ ಸಮಿತಿ ಮತ್ತು ಚುನಾವಣಾ ಆಯೋಗದ ವತಿಯಿಂದ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳ ಕಾರ್ಯಕ್ರಮವನ್ನು ನಡೆಸಲಾಯಿತುಪ್ರಬುಧ್ದ ಭಾರತವನ್ನು ನಿರ್ಮಾಣ ಮಾಡಲು ಮತದಾನ ಮಾಡಬೇಕು. ವಿದ್ಯಾರ್ಥಿಗಳಿಗೆ ಈ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ, ಮತದಾನದ ಬಗ್ಗೆ ಕಡ್ಡಾಯವಾಗಿ ಮಾಹಿತಿ ಅರಿವು ಅಗತ್ಯವಾಗಿದೆ ಎಂದರು.
ತಾಲೂಕಿನ ಲೊಕ್ಕನಹಳ್ಳಿ, ಕೌದಳ್ಳಿ, ಬಂಡಳ್ಳಿ, ಪದವಿ ಪೂರ್ವ ಕಾಲೇಜುಗಳಿಂದ ವಿದ್ಯಾರ್ಥಿಗಳು ಆಗಮಿಸಿ ಚುನಾವಣಾ ಅರಿವಿಗೆ ಸಂಬಂಧಿಸಿದಂತೆ ಪ್ರಬಂಧ, ರಸಪ್ರಶ್ನೆ, ಚರ್ಚೆ ಸ್ಪರ್ಧೆ, ಭಿತ್ತಿ ಚಿತ್ರಗಳ ಸ್ಪರ್ಧೆಯಲ್ಲಿ ಭಾಗವಹಿಸಿದರು.
ಇಎಲ್ಸಿ ಸಂಚಾಲಕ ಮಹೇಂದ್ರ ಎಚ್.ಪಿ., ರಾಜ್ಯಶಾಸ್ತ್ರ ಉಪನ್ಯಾಸಕರಾದ ಜಗದೀಶ್, ಮಹೇಶ್, ವಂದನಾ, ಇತರ ಅಧ್ಯಾಪಕರು, ಸದಸ್ಯರು, ವಿದ್ಯಾರ್ಥಿಗಳು, ಇತರರು ಹಾಜರಿದ್ದರು.