ಹೂವಿನ ಕುಂಡದ ಮೇಲೆ ಅರಳಿದ ಮತದಾನ ಜಾಗೃತಿಯ ಘೋಷ ವಾಕ್ಯ

KannadaprabhaNewsNetwork |  
Published : Apr 05, 2024, 01:10 AM IST
ಹೂವಿನ ಕುಂಡದ ಮೇಲೆ ಅರಳಿದ | Kannada Prabha

ಸಾರಾಂಶ

ತಾಲೂಕು ಪಂಚಾಯಿತಿ ಸ್ವೀಪ್ ಸಮಿತಿ ವತಿಯಿಂದ ತುಮಕೂರು ತಾಲೂಕು ಗೂಳೂರು ಹೋಬಳಿ ಹರಳೂರು ಗ್ರಾಮ ಪಂಚಾಯತಿ ಆವರಣದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮತದಾರರನ್ನು ಸೆಳೆಯಲು "ಚುನಾವಣಾ ಪರ್ವ-ದೇಶದ ಗರ್ವ " ಎಂಬ ಘೋಷ ವಾಕ್ಯವಿರುವ ಹೂವಿನ ಕುಂಡಗಳನ್ನು ಪ್ರದರ್ಶಿಸಲಾಯಿತು.

ಕನ್ನಡಪ್ರಭ ವಾರ್ತೆ ತುಮಕೂರುತಾಲೂಕು ಪಂಚಾಯಿತಿ ಸ್ವೀಪ್ ಸಮಿತಿ ವತಿಯಿಂದ ತುಮಕೂರು ತಾಲೂಕು ಗೂಳೂರು ಹೋಬಳಿ ಹರಳೂರು ಗ್ರಾಮ ಪಂಚಾಯತಿ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮತದಾರರನ್ನು ಸೆಳೆಯಲು "ಚುನಾವಣಾ ಪರ್ವ-ದೇಶದ ಗರ್ವ " ಎಂಬ ಘೋಷ ವಾಕ್ಯವಿರುವ ಹೂವಿನ ಕುಂಡಗಳನ್ನು ಪ್ರದರ್ಶಿಸಲಾಯಿತು. ನಂತರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೌತಮಾರನಹಳ್ಳಿ ಬಸವಣ್ಣನ ದೇವಸ್ಥಾನದ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಚುನಾವಣಾ ಘೋಷ ವಾಕ್ಯಗಳನ್ನು ಕೂಗುತ್ತಾ ಎಪ್ರಿಲ್ 26ರಂದು ಎಲ್ಲರೂ ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.ಈ ವೇಳೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಂಕರ್ ಮಾತನಾಡಿ, ಭಾರತ ದೇಶವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದೆ, ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವೆಲ್ಲರೂ ಕಡ್ಡಾಯವಾಗಿ ಮತದಾನ ಮಾಡಲೇಬೇಕು ಎಂದರು.ಮತದಾನ ಜಾಗೃತಿ ಕರಪತ್ರಗಳನ್ನು ಹಂಚಿ ಲೋಕಸಭೆಯ ಸಾರ್ವತ್ರಿಕ ಚುನಾವಣೆಯಂದು ಮತದಾನ ಮಾಡಲು, ಚುನಾವಣಾ ಗರುತಿನಚೀಟಿ, ಆಧಾರ್ ಕಾರ್ಡ್, ನರೇಗಾ ಉದ್ಯೋಗಚೀಟಿ, ಪಡಿತರಚೀಟಿ, ಆಯುಷ್ಮಾನ್ ಕಾರ್ಡ್, ವಾಹನ ಚಾಲನಾ ಪರವಾನಗಿ, ಪಾಸ್‌ಪೋರ್ಟ್, ಭಾವಚಿತ್ರ ಇರುವ ಪಿಂಚಣಿ ದಾಖಲೆ, ರಾಜ್ಯ ಮತ್ತು ಕೇಂದ್ರದ ಶಾಸಕರು ಮತ್ತು ಸಂಸದರಿಗೆ ನೀಡುವ ಗುರುತಿನ ಚೀಟಿ, ಜನಗಣತಿ ಇಲಾಖೆ ನೀಡಿದ ಗುರುತಿನ ಚೀಟಿ ಸೇರಿದಂತೆ ೧೧ ರೀತಿಯ ಗುರುತಿನ ದಾಖಲೆಗಳಲ್ಲಿ ಯಾವುದಾದರೊಂದು ದಾಖಲೆಯನ್ನು ಹಾಜರುಪಡಿಸುವ ಮೂಲಕ ಮತದಾನ ಮಾಡಬಹುದು.ಬರುವ ಏಪ್ರಿಲ್ 26ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ತಮ್ಮ ಮತಗಟ್ಟೆಗೆ ಭೇಟಿ ನೀಡಿ ಮತದಾನ ಮಾಡಬೇಕೆಂದು ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಐಈಸಿ ಸಂಯೋಜಕರು, ಗ್ರಾ.ಪಂ.ಯ ಗಂಗಣ್ಣ, ಸ್ವಸಹಾಯ ಸಂಘದ ಸದಸ್ಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ಸಿಬ್ಬಂದಿ ಹಾಜರಿದ್ದರು.

PREV

Recommended Stories

ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಬ್ಯಾಲೆಟ್‌ ಬಳಕೆಗೆ ಸುಗ್ರೀವಾಜ್ಞೆ ಅಗತ್ಯವಿಲ್ಲ : ಸಂಪುಟದಲ್ಲಿ ಚರ್ಚೆ