ಕನ್ನಡಪ್ರಭ ವಾರ್ತೆ ಚಾಮರಾಜನಗರ
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಹಾಗೂ ಜಿಪಂ ಉಪಕಾರ್ಯದರ್ಶಿ ಪಿ. ಲಕ್ಷ್ಮಿ ಅವರು ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕುರಿತ ಕಾರ್ಯಕ್ರಮಗಳನ್ನು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಆಯೋಜಿಸಲಾಗುತ್ತಿದೆ. ಅದರ ಭಾಗವಾಗಿ ಚುನಾವಣಾ ಘೋಷವಾಕ್ಯಗಳನ್ನು ಮುದ್ರಿಸಿರುವ ರೇಷ್ಮೆ ಸೀರೆಗಳ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬರು ಮತದಾನ ಮಾಡಬೇಕೆಂಬುದೇ ಜಾಗೃತಿ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು.
ಈ ಬಾರಿಯ ಚುನಾವಣೆಯಲ್ಲಿ ಮತದಾನ ದಿನವಾದ ಏ. 26ರಂದು ಚುನಾವಣಾ ನಿರತ ಎಲ್ಲಾ ಮಹಿಳಾ ಅಧಿಕಾರಿಗಳು, ಸಿಬ್ಬಂದಿಗಳು ಕೊಳ್ಳೇಗಾಲದ ಕೈಮಗ್ಗ ನೇಕಾರರು ವಿಶೇಷವಾಗಿ ವಿನ್ಯಾಸಗೊಳಿಸಿ ‘ಚುನಾವಣಾ ಪರ್ವ-ದೇಶದ ಗರ್ವ’ ಘೋಷವಾಕ್ಯಗಳನ್ನು ಮುದ್ರಿಸಿರುವ ರೇಷ್ಮೆ ಸೀರೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸಲಿದ್ದಾರೆ. ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು. ತಾಪಂ ಇಒ ಕೃಷ್ಣಪ್ಪ, ಜಿಲ್ಲಾಧಿಕಾರಿಯ ಕಚೇರಿಯ ಚುನಾವಣಾ ತಹಸೀಲ್ದಾರ್ ಕೀರ್ತನಾ, ಇತರರು ಇದೇ ವೇಳೆ ಇದ್ದರು.ಕಾರ್ಯಕ್ರಮದ ಬಳಿಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಶಿಲ್ಪಾ ನಾಗ್ ಹಾಗೂ ಇತರೆ ಗಣ್ಯರು ಸಖೀ ಸೌರಭದ ಬ್ಯಾನರ್ನಡಿ ನಿಂತು ‘ಚುನಾವಣಾ ಪರ್ವ ದೇಶದ ಗರ್ವ’ ಮತದಾನದ ಘೋಷವಾಕ್ಯ ಮೊಳಗಿಸಿ ಮತದಾನದ ಅರಿವು ಮೂಡಿಸಿದರು.