ಸುರಪುರ ನಗರಸಭೆಯಿಂದ ಸಾರ್ವಜನಿಕರಿಗೆ ಮತದಾನ ಅರಿವು

KannadaprabhaNewsNetwork |  
Published : Apr 03, 2024, 01:30 AM IST
ಸುರಪುರ ನಗರದಲ್ಲಿ ರಂಗೋಲಿ ಚಿತ್ರ ಬಿಡಿಸಿ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ ಮೂಡಿಸಲಾಯಿತು. | Kannada Prabha

ಸಾರಾಂಶ

ಮತದಾನದ ಮಹತ್ವದ ಕುರಿತಂತೆ ಮತದಾನ ನಿಮ್ಮ ಹಕ್ಕು ತಪ್ಪದೇ ಮತ ಚಲಾಯಿಸಿ ಎಂದು ರಂಗು ರಂಗಿನ ರಂಗೋಲಿಯ ಚಿತ್ತಾರ ಬಿಡಿಸಿ, ಪ್ರತಿಜ್ಞಾ ವಿಧಿ ಬೋಧಿಸಿ, ಅರಿವು ಮೂಡಿಸಿ ಸಾರ್ವಜನಿಕರ ಗಮನ ಸೆಳೆಯಲಾಯಿತು.

ಕನ್ನಡಪ್ರಭ ವಾರ್ತೆ ಸುರಪುರ

ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಮತ್ತು ನಗರಸಭೆ ಸಹಯೋಗದಲ್ಲಿ ಲೋಕಸಭಾ ಮತ್ತು ಉಪ ಚುನಾವಣೆ ನಿಮಿತ್ತ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಆವರಣದಲ್ಲಿ ರಂಗೋಲಿ ಬಿಡಿಸಿ ಸಾರ್ವಜನಿಕರಲ್ಲಿ ಮತದಾನದ ಅರಿವು ಮೂಡಿಸಲಾಯಿತು.

ಮತದಾನದ ಮಹತ್ವದ ಕುರಿತಂತೆ ಮತದಾನ ನಿಮ್ಮ ಹಕ್ಕು ತಪ್ಪದೇ ಮತ ಚಲಾಯಿಸಿ ಎಂದು ರಂಗು ರಂಗಿನ ರಂಗೋಲಿಯ ಚಿತ್ತಾರ ಬಿಡಿಸಿ, ಪ್ರತಿಜ್ಞಾ ವಿಧಿ ಬೋಧಿಸಿ, ಅರಿವು ಮೂಡಿಸಿ ಸಾರ್ವಜನಿಕರ ಗಮನ ಸೆಳೆಯಲಾಯಿತು. ಮತದಾನಕ್ಕಿಂತ ಇನ್ನೊಂದಿಲ್ಲ. ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಘೋಷ್ಯ ವಾಕ್ಯ ಹೇಳಲಾಯಿತು.

ನಂತರ ಚುನಾವಣಾಧಿಕಾರಿಗಳು ಮಾತನಾಡಿ, ಮತದಾನ ಪ್ರಜಾಪ್ರಭುತ್ವದ ಅಡಿಗಲ್ಲು ಮತ್ತು ಸಂವಿಧಾನಿಕ ಹಕ್ಕು. ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಬೇಕು ಮತ್ತು ಕರ್ತವ್ಯ ನಿಭಾಯಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ತಿಳಿಸಿದರು.

ಸಹಾಯಕ ಅಧಿಕಾರಿ ಕಾವ್ಯರಾಣಿ, ವಿಜಯಕುಮಾರ, ನಗರಸಭೆ ಕಮಿಷನರ್ ಮಂಜುನಾಥ ಶಿಡ್ಲಘಟ್ಟ, ತಾಪಂ ಅಧಿಕಾರಿ ಬಸವರಾಜ ಸಜ್ಜನ್, ಶಾಂತಪ್ಪ ಹೊಸೂರು, ವ್ಯವಸ್ಥಾಪಕ ಯಲ್ಲಪ್ಪ ನಾಯಕ, ಮಹೇಶ ಮಾಳಗಿ, ರತ್ನಮ್ಮ, ಸಂಗಮ್ಮ, ಗುರುಸ್ವಾಮಿ, ಹಣಮಂತ ಯಾದವ, ಮೋಹಿನುದ್ದೀನ್, ದುರ್ಗಪ್ಪ ನಾಯಕ, ತಿಪ್ಪಮ್ಮ ಬಿರಾದಾರ್ ಸೇರಿದಂತೆ ನಗರಸಭೆ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ