- ಭಾರತ್ ಆಯಿಲ್ ಮಿಲ್ ಕಾಪೌಂಡ್ ನಿವಾಸಿಗಳ ತೀರ್ಮಾನ: ಎಚ್.ಕೆ.ಮೂರ್ತಿ - - - ಕನ್ನಡಪ್ರಭ ವಾರ್ತೆ ಹರಿಹರ
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು, ನಗರದ ಭಾರತ್ ಆಯಿಲ್ ಮಿಲ್ ಕಾಪೌಂಡ್ನಲ್ಲಿ ೧೩೦ಕ್ಕೂ ಹೆಚ್ಚು ಕುಟುಂಬಗಳು ಕಳೆದ ೬೦ ವರ್ಷಗಳಿಂದ ವಾಸಿಸುತ್ತಿದ್ದಾರೆ. ಇದುವರೆಗೂ ನಮ್ಮ ಮನೆಗಳಿಗೆ ಹಕ್ಕುಪತ್ರಗಳನ್ನು ನೀಡಿಲ್ಲ. ಹಲವು ಬಾರಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದರೂ ಕೇವಲ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯ ಬಡ ಕೂಲಿಕಾರ್ಮಿಕರು ಜೀವನ ಮಾಡುತ್ತಿದ್ದಾರೆ. ಆಳುವ ಸರ್ಕಾರಗಳಿಗೆ ಆದ್ಯತೆ ಮೇಲೆ ಈ ಭಾಗದಲ್ಲಿ ಅಭಿವೃದ್ಧಿ ಮಾಡುವುದು ಅವರ ಕರ್ತವ್ಯವಾಗಿದೆ. ಆದರೆ, ಇಲ್ಲಿನ ನಿವಾಸಿಗಳ ದುರ್ದೈವ ಎಂಬಂತೆ ಇಲ್ಲಿಯವರೆಗೂ ಚರಂಡಿ, ಬೀದಿದೀಪ, ಶುದ್ಧ ನೀರಿನ ಘಟಕ ಉತ್ತಮ ರಸ್ತೆ, ಶೌಚಾಲಯಗಳಿಂದ ವಂಚಿತವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಭಾಗದ ಸಮಸ್ಯೆಗಳ ಕುರಿತು ಸ್ಥಳೀಯ ಜನಪ್ರತಿನಿಧಿ ಹಾಗೂ ನಗರಸಭೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದಾಗ ಸ್ಥಳಕ್ಕೆ ಬಂದು ವೀಕ್ಷಣೆ ಮಾಡಿ, ಕೂಡಲೇ ಬಗೆಹರಿಸುವುದಾಗಿ ಪೊಳ್ಳು ಭರವಸೆ ನೀಡುತ್ತ ನಂಬಿಕೆಗೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಸ್ಥಳೀಯ ನಿವಾಸಿಗಳಾದ ಎಂ.ಕೃಷ್ಣ, ರಮೇಶ್, ಅಣ್ಣಪ್ಪ, ಹನುಮಂತಪ್ಪ ಎಚ್.ಯಮನೂರು ಸೇರಿದಂತೆ ಇತರರಿದ್ದರು. - - - -೧ಎಚ್ಆರ್ಆರ್೩:
ಹರಿಹರದ ಪತ್ರಿಕಾ ಭವನದಲ್ಲಿ ಬುಧವಾರ ಎಚ್.ಕೆ.ಮೂರ್ತಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.