ಮತದಾನ ನಾಗರಿಕನ ಹಕ್ಕು, ಕರ್ತವ್ಯ: ಎಚ್.ಷಡಕ್ಷರಯ್ಯ

KannadaprabhaNewsNetwork |  
Published : Apr 04, 2024, 01:04 AM IST
ದ್ಗ | Kannada Prabha

ಸಾರಾಂಶ

ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಬೇಕು. ಮತದಾನದ ಬಗ್ಗೆ ತಾತ್ಸಾರ ಬೇಡ. ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು.

ಸಂಡೂರು:

ತಾಲೂಕಿನ ದರೋಜಿ ಗ್ರಾಪಂ ವ್ಯಾಪ್ತಿಯ ಹೊಸ ಮಾದಾಪುರ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗಿರುವ ನಾಲಾ ಹೂಲೆತ್ತುವ ಕಾಮಗಾರಿ ಕೆಲಸದ ಸ್ಥಳದಲ್ಲಿ ಬುಧವಾರ ಮತದಾನ ಜಾಗೃತಿ ಕಾರ್ಯಕ್ರಮ ಮ್ಮಿಕೊಳ್ಳಲಾಯಿತು.

ಮತದಾನದ ಮಹತ್ವ ಕುರಿತು ಮಾತನಾಡಿದ ತಾಲೂಕು ಪಂಚಾಯತ್‌ ಇಒ ಎಚ್. ಷಡಕ್ಷರಯ್ಯ, ಮತದಾನ ಪ್ರತಿಯೊಬ್ಬ ನಾಗರಿಕರ ಹಕ್ಕು ಹಾಗೂ ಕರ್ತವ್ಯವೂ ಆಗಿದೆ. ೧೮ ವರ್ಷ ತುಂಬಿದ ಪ್ರತಿಯೊಬ್ಬರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಬೇಕು. ಸದೃಢ ರಾಷ್ಟ್ರ ನಿರ್ಮಾಣ ಹಾಗೂ ಪ್ರಜಾಪ್ರಭುತ್ವಕ್ಕಾಗಿ ಪ್ರತಿಯೊಬ್ಬರು ಮತದಾನ ಮಾಡಿ, ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಬೇಕು. ಮತದಾನದ ಬಗ್ಗೆ ತಾತ್ಸಾರ ಬೇಡ. ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಹೇಳಿದರಲ್ಲದೆ, ಕೂಲಿ ಕಾರ್ಮಿಕರಿಗೆ ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಇದೇ ಸಂದರ್ಭದಲ್ಲಿ ಕಾರ್ಯನಿರ್ವಹಣಾಧಿಕಾರಿಗಳು ಮೇಟಿಗಳಿಗೆ ಜಾಬ್ ಕಾರ್ಡ್‌ಗಳನ್ನು ನಿಯಮಿತವಾಗಿ ಅಪ್ಡೇಟ್ ಮಾಡುವುದು, ಜಾಬ್ ಕಾರ್ಡ್ ವಿಭಜನೆ, ನರೇಗಾ ಅಧಿಸೂಚಿತ ಕೂಲಿ ಮೊತ್ತ ಪಡೆಯಲು ನಿರ್ವಹಿಸಬೇಕಾದ ಕೆಲಸ ಹಾಗೂ ಕೆಲಸದ ಸ್ಥಳದಲ್ಲಿನ ಸೌಲಭ್ಯಗಳ ಕುರಿತು ವಿವರಿಸಿದರು.

ಈ ಸಂದರ್ಭದಲ್ಲಿ ನರೇಗಾ ಯೋಜನೆಯ ಸಹಾಯಕ ನಿರ್ದೇಶಕರಾದ ರೇಣುಕಸ್ವಾಮಿ, ಪಿಡಿಒ, ಟಿಐಇಸಿ, ಟಿಎ ಹಾಗೂ ಗ್ರಾಮ ಪಂಚಾಯ್ತಿ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ