ಕನ್ನಡಪ್ರಭ ವಾರ್ತೆ ಬೆಂಗಳೂರು
ಚುನಾವಣೆ ಸಂಬಂಧ ಜೂ.1ರಂದು ಅಧಿಕೃತ ಅಧಿಸೂಚನೆ ಹೊರ ಬೀಳಲಿದೆ. ಜೂ.8 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜೂ.18ರಂದು ಮತದಾನ ನಡೆಯಲಿದ್ದು, ಅಂದೇ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಈ ಏಳು ಸ್ಥಾನಗಳ ಪೈಕಿ ಕಾಂಗ್ರೆಸ್ ಮತ್ತು ಬಿಜೆಪಿಯ ತಲಾ ಮೂವರು ಮತ್ತು ಜೆಡಿಎಸ್ನ ಓರ್ವ ಸದಸ್ಯರ ಅವಧಿ ಜೂ.30ರಂದು ಅಂತ್ಯಗೊಳ್ಳಲಿದೆ.
ಚುನಾವಣಾ ವೇಳಾ ಪಟ್ಟಿ ಪ್ರಕಟಗೊಂಡ ಬೆನ್ನಲ್ಲೇ ಮೂರು ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಆಕಾಂಕ್ಷಿಗಳು ಅಲರ್ಟ್ ಆಗಿದ್ದಾರೆ. ಈ ಚುನಾವಣೆಯಲ್ಲಿ ವಿಧಾನಸಭೆ ಶಾಸಕರು ಗೌಪ್ಯ ಮತದಾನ ಮಾಡಲಿದ್ದಾರೆ. ಒಂದು ಸ್ಥಾನ ಗೆಲ್ಲಲು 28 ಮತಗಳ ಅಗತ್ಯವಿದೆ. ವಿಧಾನಸಭೆಯಲ್ಲಿ ರಾಜಕೀಯ ಪಕ್ಷಗಳ ಶಾಸಕರ ಸಂಖ್ಯಾಬಲದ ಆಧಾರದ ಮೇಲೆ ಆಡಳಿತ ಪಕ್ಷ ಕಾಂಗ್ರೆಸ್ ಐದು ಮತ್ತು ವಿರೋಧ ಪಕ್ಷ ಬಿಜೆಪಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಬಹುತೇಕ ನಿಶ್ಚಿತ. ಆದರೆ, ಬಿಜೆಪಿ-ಜೆಡಿಎಸ್ ಮೈತ್ರಿಯಿಂದ 8ನೇ ಅಭ್ಯರ್ಥಿ ಸ್ಪರ್ಧೆಗಿಳಿದರೆ ಚುನಾವಣೆ ರೋಚಕತೆ ಪಡೆದುಕೊಳ್ಳಲಿದೆ.ಪ್ರಸ್ತುತ ಕಾಂಗ್ರೆಸ್ ಸ್ಪೀಕರ್ ಸೇರಿ 135, ಬಿಜೆಪಿ 62, ಜೆಡಿಎಸ್ 18 ಶಾಸಕರನ್ನು ಹೊಂದಿದೆ. ಉಳಿದಂತೆ ಸರ್ವೋದಯ ಕರ್ನಾಟಕ ಪಕ್ಷದ(ಕೆಎಸ್ಪಿ) ಶಾಸಕ ದರ್ಶನ್ ಪುಟ್ಟಣ್ಣಯ್ಯ, ಹರಪ್ಪನಹಳ್ಳಿ ಸ್ವತಂತ್ರ ಶಾಸಕಿ ಲತಾ ಮಲ್ಲಿಕಾರ್ಜುನ್ ಮತ್ತು ಗೌರಿಬಿದನೂರು ಸ್ವತಂತ್ರ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಕಾಂಗ್ರೆಸ್ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿದ್ದಾರೆ. ಹೀಗಾಗಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನೇ ಈ ಮೂವರು ಬೆಂಬಲಿಸುವ ಸಾಧ್ಯತೆಯಿದೆ.
ಬಿಜೆಪಿ ಮತ್ತೋರ್ವ ಉಚ್ಚಾಟಿತ ಶಾಸಕ ಬಸನಗೌಡ ಯತ್ನಾಳ್ ಯಾರಿಗೆ ಮತ ಹಾಕಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ. ಇನ್ನು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ(ಕೆಆರ್ಪಿಪಿ) ಶಾಸಕ ಜನಾರ್ಧನ ರೆಡ್ಡಿ ಬಿಜೆಪಿ ಜೊತೆಗೆ ಗುರುತಿಸಿಕೊಂಡಿದ್ದು, ಚುನಾವಣೆಯಲ್ಲಿ ಬಿಜೆಪಿಯನ್ನೇ ಬೆಂಬಲಿಸುವುದು ಸ್ಪಷ್ಟ. ಒಂದು ವೇಳೆ ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ 8ನೇ ಅಭ್ಯರ್ಥಿ ಕಣಕ್ಕಿಳಿಸಿದರೆ ಚುನಾವಣೆ ಕೊಂಚ ರೋಚಕತೆ ಪಡೆದುಕೊಳ್ಳಲಿದೆ. ಹೇಗೆಂದರೆ, ಜೆಡಿಎಸ್ನ 18 ಮತ್ತು ಬಿಜೆಪಿ ಉಳಿಕೆ 7 ಮತಗಳು ಸೇರಿದರೆ ಒಟ್ಟು 25 ಮತಗಳಾಗಲಿದೆ. ಗೆಲ್ಲಲು 3 ಮತಗಳ ಕೊರತೆ ಉಂಟಾಗಲಿದೆ. ಕಾಂಗ್ರೆಸ್ನ ಅಥವಾ ಕಾಂಗ್ರೆಸ್ ಬೆಂಬಲಿತ ಮೂವರು ಶಾಸಕರು ಅಡ್ಡ ಮತದಾನ ಮಾಡಿದರೆ, 8ನೇ ಅಭ್ಯರ್ಥಿ ಗೆಲ್ಲುವ ಸಾಧ್ಯತೆಯಿದೆ. ಆದರೆ, ಈ ಚುನಾವಣೆಯಲ್ಲಿ ಅಡ್ಡಮತದಾನದ ಸಾಧ್ಯತೆ ಸದ್ಯಕ್ಕೆ ಕಂಡು ಬರುತ್ತಿಲ್ಲ.
ಚುನಾವಣಾ ವೇಳಾ ಪಟ್ಟಿ:
- ಜೂ.8 ನಾಮಪತ್ರ ಸಲ್ಲಿಕೆಗೆ ಕೊನೆ ದಿನ
- ಜೂ.11 ನಾಮಪತ್ರ ಹಿಂಪಡೆಯಲು ಕೊನೆ ದಿನ
-ಬಾಕ್ಸ್-ಜೂ.30ರಂದು ಯಾರು ನಿವೃತ್ತಿ?
-ಬಾಕ್ಸ್-
ಪಕ್ಷಸದಸ್ಯ ಬಲಕಾಂಗ್ರೆಸ್135
ಬಿಜೆಪಿ 62ಬಿಜೆಪಿಯಿಂದ ಉಚ್ಚಾಟಿತರು3
ಜೆಡಿಎಸ್18ಕೆಆರ್ಪಿಪಿ1
ಎಸ್ಕೆಪಿ1ಸ್ವತಂತ್ರ2
ಖಾಲಿ2ಒಟ್ಟು224