ಮನೆಯಿಂದಲೆ ಮತದಾನ: ಕೊಡಗು ಜಿಲ್ಲೆಯಲ್ಲಿ ಶೇ.41 ಸಾಧನೆ

KannadaprabhaNewsNetwork |  
Published : Apr 17, 2024, 01:16 AM IST
ಚಿತ್ರ : 16ಎಂಡಿಕೆ1 : 5 ಮೀರಿರುವ ಹಿರಿಯ ನಾಗರೀಕರು ಮನೆಯಲ್ಲಿ ಮತದಾನ ಮಾಡುತ್ತಿರುವುದು.  | Kannada Prabha

ಸಾರಾಂಶ

ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 22 ಮಾರ್ಗಗಳಲ್ಲಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ 21 ಮಾರ್ಗಗಳಲ್ಲಿ ಏ. 15, ಏ.16 ಮತ್ತು ಏ.17 ರಂದು ಮನೆ ಮನೆಗೆ ತೆರಳಿ ಗೈರು ಹಾಜರಿ ಮತದಾರರಿಂದ ಮತದಾನ ಮಾಡಿಸುವ ಕರ್ತವ್ಯ ನಿರ್ವಹಿಸುತ್ತಿವೆ. ಈ ತನಕ ಜಿಲ್ಲೆಯಲ್ಲಿ ಶೇ.೪೧ರಷ್ಟು ಸಾಧನೆ ಆಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ವಯಸ್ಸು 85 ಮೀರಿರುವ ಹಿರಿಯ ನಾಗರಿಕರು(ಎವಿಎಸ್‌ಸಿ), ವಿಕಲಚೇತನರು (ಎವಿಪಿಡಿ) ಮತ್ತು ಕೋವಿಡ್ ಶಂಕಿತ/ಬಾಧಿತ ವ್ಯಕ್ತಿಗಳನ್ನು (ಎವಿಸಿಒ) ಮತ್ತು ಅಗತ್ಯ ಸೇವೆಗಳ ಮೇರೆ ನಿಯೋಜನೆಗೊಂಡಿರುವ(ಎವಿಇಎಸ್) ವ್ಯಕ್ತಿಗಳನ್ನು ಗೈರು ಹಾಜರಿ ಮತದಾರರು ಎಂದು ಪರಿಗಣಿಸಲಾಗುತ್ತದೆ. ಈ ಗೈರು ಹಾಜರಿ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗಬಾರದೆಂಬುದನ್ನು ಗಮನದಲ್ಲಿರಿಸಿ ಇವರಿಗೆ ಮನೆಯಿಂದಲೆ ಮತದಾನ (ಹೋಮ್ ವೋಟಿಂಗ್) ಮಾಡುವ ಸೌಲಭ್ಯ ಕಲ್ಪಿಸಲಾಗಿದೆ.ಜಿಲ್ಲೆಯಲ್ಲಿ ಈ ತನಕ ಮನೆಯಿಂದಲೇ ಮತದಾನ ವ್ಯವಸ್ಥೆಯಲ್ಲಿ ಶೇ.41 ಸಾಧನೆ ದಾಖಲಾಗಿದೆ.

ಮನೆಯಿಂದಲೆ ಮತದಾನ (ಹೋಮ್ ವೋಟಿಂಗ್) ಕಾರ್ಯಕ್ಕೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಒಬ್ಬರು ಮೈಕ್ರೋ ಅಬ್ಸರ್ವರ್, ಬಿಎಲ್‌ಓ, ವಿಡಿಯೋ ಗ್ರಾಫರ್ ಹಾಗೂ ಸೆಕ್ಟರ್ ಅಧಿಕಾರಿಗಳನ್ನೊಳಗೊಂಡ ತಂಡಗಳು ಕಾರ್ಯ ನಿರ್ವಹಿಸುತ್ತಿವೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 22 ಮಾರ್ಗಗಳಲ್ಲಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ 21 ಮಾರ್ಗಗಳಲ್ಲಿ ಏ. 15, ಏ.16 ಮತ್ತು ಏ.17 ರಂದು ಮನೆ ಮನೆಗೆ ತೆರಳಿ ಗೈರು ಹಾಜರಿ ಮತದಾರರಿಂದ ಮತದಾನ ಮಾಡಿಸುವ ಕರ್ತವ್ಯ ನಿರ್ವಹಿಸುತ್ತಿವೆ.

ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳ ಪೈಕಿ ಗುರುತಿಸಲಾದ 5689 ಹಿರಿಯ ನಾಗರಿಕರ (ಎವಿಎಸ್‌ಸಿ) ಪೈಕಿ 1474 ಮಂದಿ 12ಡಿ ನಮೂನೆಯಲ್ಲಿ ಮನೆ ಮತದಾನ (ಹೋಮ್ ವೋಟಿಂಗ್) ಗೆ ಆಯ್ಕೆ ಮಾಡಿಕೊಂಡಿದ್ದು, ಈ ಪೈಕಿ 601 ಮತ ಚಲಾವಣೆ ಆಗಿದ್ದು, ಶೇ.40.77 ರಷ್ಟು ಮತದಾನವಾಗಿರುತ್ತದೆ.

ವಿಕಲಚೇತನ(ಎವಿಪಿಡಿ) ಮತದಾರರ ಪೈಕಿ ಗುರುತಿಸಲಾದ 4383 ಮತದಾರರಲ್ಲಿ 643 ಮಂದಿ 12ಡಿ ನಮೂನೆಯಲ್ಲಿ ಹೋಂ ವೋಟಿಂಗ್‌ಗೆ ಆಯ್ಕೆ ಮಾಡಿಕೊಂಡಿದ್ದು, ಈ ಪೈಕಿ 264 ಮತ ಚಲಾವಣೆ ಆಗಿದ್ದು, ಶೇ. 41.06 ರಷ್ಟು ಮತದಾನವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಕೆಲಸವನ್ನು ತಲೆಮೇಲೆ ಹೊತ್ತು ಮಾಡುವೆ
ಜಾತಿ ವೈಷಮ್ಯಕ್ಕೆ ಅವಕಾಶವಿಲ್ಲ:ಡಾ. ತೌಫೀಕ್‌ ಪಾರ್ಥನಳ್ಳಿ