ಕಡ್ಡಾಯವಾಗಿ ಮತದಾನ ಮಾಡಿ

KannadaprabhaNewsNetwork |  
Published : Apr 05, 2024, 01:01 AM IST
ಹೊಸ ಬಸ್ ನಿಲ್ದಾಣದ (ಸ್ಯಾಟ್ ಲೈಟ್) ಹತ್ತಿರ  ದಿನಗೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಮೂಡಿಸಲಾಯಿತು | Kannada Prabha

ಸಾರಾಂಶ

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಮತದಾನವು ಶೇ.100 ರಷ್ಟು ಆಗಬೇಕು. ಅದಕ್ಕಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಸಿ.ಆರ್. ಮುಂಡರಗಿ ಹೇಳಿದರು.

ಕನ್ನಡಭ ವಾರ್ತೆ ವಿಜಯಪುರ

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಮತದಾನವು ಶೇ.100 ರಷ್ಟು ಆಗಬೇಕು. ಅದಕ್ಕಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಸಿ.ಆರ್. ಮುಂಡರಗಿ ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕಾರ್ಮಿಕ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ವಿಜಯಪುರ ನಗರದ ಹೊಸ ಬಸ್ ನಿಲ್ದಾಣದ (ಸ್ಯಾಟ್ ಲೈಟ್) ಹತ್ತಿರ ನೆರೆದಿರುವ ದಿನಗೂಲಿ ಕಾರ್ಮಿಕರು, ಪಾಟೀಲ ಪ್ಲಾನೆಟ್ ಶೋರೂಮ್ ಹಾಗೂ ಬಿಜ್ಜರಗಿ ಟಾಟಾ ಮೋಟರ್ಸ್ ಕಂಪನಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರೊಂದಿಗೆ ಮತದಾರರ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದರು.

ಮತದಾನ ಎಂಬುವುದು ನಮ್ಮ ಜವಾಬ್ದಾರಿಯಷ್ಟೇ ಅಲ್ಲ ಅದು ನಮ್ಮ ಹಕ್ಕು. ಸದೃಢ ಸಮಾಜ ನಿರ್ಮಾಣ ಮಾಡಲು ಮತದಾನ ಸಹಕಾರಿಯಾಗುತ್ತದೆ. ಕುಟುಂಬ, ನೆರೆಹೊರೆಯ ಜನರಿಗೆ ಮತದಾನದ ಮಹತ್ವವನ್ನು ಸಾರಿ ಜಾಗೃತಿ ಮೂಡಿಸಬೇಕಾಗಿದೆ. ಮತದಾನ ದಿನದಂದು ಎಲ್ಲ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ. ಇದರ ಸದುಪಯೋಗ ಪಡೆದುಕೊಂಡು ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬವನ್ನು ನಾವೆಲ್ಲರೂ ಮತದಾನ ಮಾಡುವುದರ ಮೂಲಕ ಸಂಭ್ರಮಿಸೋಣ ಎಂದರು.

ಎಲ್ಲರೂ ಮತದಾರರ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಬಳಿಕ ಎಲ್ಲ ಅಧಿಕಾರಿಗಳು, ಸಿಬ್ಬಂದಿಯವರು ಹಾಗೂ ಕಾರ್ಮಿಕರು ಚುನಾವಣಾ ಪರ್ವ ದೇಶದ ಗರ್ವ, “ಮತದಾನ ನಮ್ಮೆಲ್ಲರ ಹಕ್ಕು”, “ಮತದಾನ ಮಾಡಿದವನೇ ಮಹಾಶೂರ”, “ನೋಂದಾಯಿಸಿ ನೋಂದಾಯಿಸಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ನೊಂದಾಯಿಸಿ”, “ಮಾಡಿ ಮಾಡಿ ಮತದಾನ”, “ಮತದಾರರ ಪಟ್ಟಿಯ ಮಾಹಿತಿ ತಿದ್ದುಪಡಿಗಾಗಿ ನಮೂನೆ 8 ಬಳಸಿ” ಎಂಬ ಘೋಷಣೆಗಳನ್ನು ಕೂಗಲಾಯಿತು.

ಜಿಲ್ಲಾ ಪಂಚಾಯತಿಯ ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ. ಬಿ. ಅಲ್ಲಾಪೂರ, ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ, ಕಾರ್ಮಿಕ ನಿರೀಕ್ಷಕಿ ಜಗದೇವಿ ಸಜ್ಜನ, ಜಿಲ್ಲಾ ಪಂಚಾಯತಿ ಸುರೇಶ ಕೊಂಡಗೂಳಿ, ಅಮೋಘಿ ಗೌಳಿ, ವಿಶ್ವನಾಥ ಶಹಾಪೂರ, ಸುವರ್ಣ ಭಜಂತ್ರಿ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ