ಮತದಾನ ಮಾಡುವುದು ನಮ್ಮ ಹಕ್ಕು: ಫೌಜಿಯಾ ತರನ್ನುಮ್

KannadaprabhaNewsNetwork |  
Published : Apr 29, 2024, 01:35 AM IST
ಡಾ. ಬಿ.ಆರ್. ಅಂಬೇಡ್ಕರ  ಅವರು ನೀಡಿರುವ ಸಂವಿಧಾನದ ಮೂಲಕ ನಮಗೆ ಹಕ್ಕು ಮತ್ತ ಕರ್ತವ್ಯಗಳು ಪ್ರಾಪ್ತವಾಗಿವೆ. ಹಾಗಾಗಿ ಮತದಾನ ಮಾಡುವುದು ನಮ್ಮ ಹಕ್ಕು ಮತ್ತು ಕರ್ತವ್ಯವಾಗಿದೆ. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕೆಂದು  ಜಿಲ್ಲಾ ಚುನಾವಣಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ಕರೆ ನೀಡಿದರು. | Kannada Prabha

ಸಾರಾಂಶ

ಮತದಾನ ಮಾಡುವುದು ನಮ್ಮ ಹಕ್ಕು ಮತ್ತು ಕರ್ತವ್ಯವಾಗಿದೆ. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ಡಾ. ಬಿ.ಆರ್. ಅಂಬೇಡ್ಕರ್‌ ಅವರು ನೀಡಿರುವ ಸಂವಿಧಾನದ ಮೂಲಕ ನಮಗೆ ಹಕ್ಕು ಮತ್ತು ಕರ್ತವ್ಯಗಳು ಪ್ರಾಪ್ತವಾಗಿವೆ. ಹಾಗಾಗಿ ಮತದಾನ ಮಾಡುವುದು ನಮ್ಮ ಹಕ್ಕು ಮತ್ತು ಕರ್ತವ್ಯವಾಗಿದೆ. ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಕರೆ ನೀಡಿದರು.

ಭಾರತ ಚುನಾವಣೆ ಆಯೋಗ, ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಆರ್ಚಿಡ್ ಮಾಲ್‌ನಲ್ಲಿ ಅಲ್ಲಿನ ನೌಕರರು/ಕಾರ್ಮಿಕರಿಗಾಗಿ ಆಯೋಜಿಸಿದ್ದ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೇ ೭ರಂದು ಲೋಕಸಭಾ ಚುನಾವಣೆ ನಡೆಯಲಿದೆ. ಮತದಾನದಿಂದ ನಿಮಗೆಲ್ಲರೂ ವೇತನ ಸಹಿತ ರಜೆ ನೀಡಲಾಗುತ್ತಿದೆ. ಅಂದು ಪ್ರತಿಯೊಬ್ಬರೂ ಮತ ಚಲಾಯಿಸಬೇಕೆಂದು ಅವರು ಮನವಿ ಮಾಡಿದರು.

ಕೆಲವೊಂದು ದೇಶಗಳಲ್ಲಿ ಮಹಿಳೆಯರಿಗೆ ಮತದಾನ ಮಾಡಲು ಹಕ್ಕು ಇರುವುದಿಲ್ಲ. ಆದರೆ ನಮ್ಮ ದೇಶದಲ್ಲಿ ಮಹಿಳೆಯರಿಗೆ ಮತದಾನ ಮಾಡುವ ಹಕ್ಕು ನೀಡಲಾಗಿದೆ ಎಂದು ಹೆಮ್ಮೆಯಿಂದ ನುಡಿದ ಅವರು, ಮತದಾನ ಬಗ್ಗೆ ನೀವು ನಿಮ್ಮ-ನಿಮ್ಮ ಅಕ್ಕ-ಪಕ್ಕದ ಮನೆಯವರಿಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಭಂವರ್ ಸಿಂಗ್ ಮೀನಾ ಅವರು ಮಾತನಾಡಿ, ಮೇ ೭ರಂದು ತಪ್ಪದೇ ಮತದಾನ ಮಾಡಬೇಕು. ಮತದಾನ ಹಕ್ಕು ನಾವು ಎಲ್ಲರೂ ಚಲಾಯಿಸಬೇಕು, ಯಾರೂ ಮತದಾನದಿಂದ ವಂಚಿತರಾಗಬಾರದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಎಸ್.ಆರ್. ಹಳ್ಳಿಮನಿ ಮತದಾನ ಕುರಿತ ಪ್ರತಿಜ್ಞೆ ವಿಧಿ ಬೋಧಿಸಿದರು. ಇದೇ ಸಂದರ್ಭದಲ್ಲಿ ಹಸ್ತಾಕ್ಷರ ಅಭಿಯಾನ ನಡೆಸಲಾಯಿತು. ಜೊತೆಗೆ ಸೆಲ್ಪಿಸ್ಟಾö್ಯಂಡ್ ನಲ್ಲಿ ಹಲವರು ಖುಷಿಯಿಂದ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಮತದಾನ ಅರಿವು ಪಡೆದುಕೊಂಡರು.

ಬಳಿಕ ಮಾಲ್‌ನಲ್ಲಿರುವ ಚಿತ್ರಮಂದಿರದಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಯಿತು. ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಯಲಗಳ ಪದವಿ ವಿದ್ಯಾರ್ಥಿನಿಯರು ಮೂರು ನಾಟಕಗಳ ಪ್ರದರ್ಶಿಸಿ, ಚುನಾವಣೆಯ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.

ಹೆಂಡ ಮತ್ತು ಹಣದ ಆಮಿಷಕ್ಕೊಳಗಾಗಬಾರದು, ಉತ್ತಮ ಅಭ್ಯರ್ಥಿ ಆಯ್ಕೆ ಮಾಡಬೇಕು. ಪೊಳ್ಳು ಭರವಸೆಗಳಿಂದ ಜನರು ಸಂಕಷ್ಟಕೊಳಗಾಗುವುದು, ೮೫ ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನ ಮಾಡಿಸುವುದು ಮುಂತಾದ ಜಾಗೃತಿ ಅಂಶಗಳನ್ನೊಂಡ ಹಾಸ್ಯಮಿಶ್ರಿತ ನಾಟಕಗಳು ನೋಡುಗರ ಮೆಚ್ಚುಗೆಗೆ ಪಾತ್ರವಾದವು.

ಇದೇ ಸಂದರ್ಭದಲ್ಲಿ ಚುನಾವಣೆ ಜಾಗೃತಿ ಮೂಡಿಸುವ “ನಾ ಭಾರತ” ಎಂಬ ದೃಶ್ಯ ಗೀತೆಯನ್ನು ಪ್ರದರ್ಶಿಸಲಾಯಿತು. ಬಳಿಕ ಬಾಲಿವುಡ್ ನಟ ಅಜಯ್ ದೇವಗನ್ ನಟನೆಯ ಮೈದಾನ್ ಸಿನಿಮಾವನ್ನು ವಿದ್ಯಾರ್ಥಿನಿಯರಿಗಾಗಿ ಪ್ರದರ್ಶಿಸಲಾಯಿತು. ಫುಟ್‌ಬಾಲ್ ಕೋಚ್ ಸೈಯದ್ ಅಬ್ದುಲ್ ರಹೀಮ್ ಅವರ ನೈಜ ಕಥಾಹಂದರ ಹೊಂದಿದ್ದು, ಸ್ವೀಪ್ ಕಾರ್ಯಕ್ರಮಕ್ಕೆ ಭಾಗವಹಿಸಿದ್ದ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಪ್ರದರ್ಶಿಸಲಾಯಿತು. ಆರ್ಚಿಡ್ ಮಾಲ್ ಮಾಲೀಕರಾದ ರಾಘವೇಂದ್ರ ಮೈಲಾಪೂರ ಪ್ರಾಯೋಜಕತ್ವದಲ್ಲಿ ಮಾಲ್‌ನ ಕಾರ್ಯಕ್ರಮಗಳು ನಡೆದವು.

ಜಿಲ್ಲಾಪಂಚಾಯತ್ ಉಪ ಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಅಬ್ದುಲ್ ಅಜೀಮ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ್ ರಾಜೋಳಕರ್, ಆರ್ಚಿಡ್ ಮಾಲ್ ಮಾಲೀಕರಾದ ರಾಘವೇಂದ್ರ ಮೈಲಾಪೂರ ಮುಂತಾದವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ