ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಐಕ್ಯೂಎಸಿ, ಎನ್ಎಸ್ಎಸ್, ರೆಡ್ಕ್ರಾಸ್, ರೋವರ್, ರೇಂಜರ್ ಘಟಕಗಳ ವತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ ಅವರು, ನಮ್ಮ ಮತದಾನ ಸದೃಢ ಭಾರತ ನಿರ್ಮಾಣಕ್ಕೆ ಆಧಾರ. ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೇ ನಿರ್ಭಯವಾಗಿ ಮತದಾನ ಮಾಡಬೇಕು ಎಂದು ತಿಳಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸುವ ದೃಷ್ಠಿಯಿಂದ ಮತದಾನವು ತುಂಬಾ ಮುಖ್ಯವಾದ ಕರ್ತವ್ಯ ಆಗಿದೆ. ಅಮೂಲ್ಯವಾದ ಮತವನ್ನು ಮಾರಿಕೊಳ್ಳದೇ ಪಾವಿತ್ರ್ಯತೆ ಕಾಪಾಡಿ, ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು. ದೇಶವನ್ನು ಭ್ರಷ್ಟಮುಕ್ತಗೊಳಿಸಬೇಕು. ದೇಶದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.ಜಾಗೃತಿ ಜಾಥಾ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಟಿಎನ್ಸಿಸಿ ಕಾಲೇಜಿನ ಪ್ರಾಚಾರ್ಯೆ ಪ್ರೊ. ಮಮತಾ ಪಿ.ಆರ್. ಮಾತನಾಡಿ, ವಿದ್ಯಾರ್ಥಿಗಳು ಮತದಾನದ ಬಗ್ಗೆ ಸಮಗ್ರ ಮಾಹಿತಿ ತಿಳಿದುಕೊಳ್ಳಬೇಕು. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನಕ್ಕೆ ವಿಶೇಷ ಪ್ರಾಮುಖ್ಯತೆ ಇದ್ದು, ಅದರ ಮಹತ್ವ ಅರಿತುಕೊಂಡು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮತದಾನದ ಬಗ್ಗೆ ಪ್ರತಿಜ್ಞಾವಿಧಿ ಬೋಧನೆ ಮಾಡಲಾಯಿತು. ಎನ್ಎಸ್ಎಸ್ ಅಧಿಕಾರಿ ಪ್ರೊ. ಎಸ್. ಜಗದೀಶ್, ಪ್ರೊ. ಕೆ.ಎಂ. ನಾಗರಾಜ್, ಪ್ರೊ. ಎನ್.ಮಂಜುನಾಥ್, ಬಿ.ಎನ್. ಪ್ರವೀಣ, ಆರ್.ರಂಗನಾಥ್, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಐಕ್ಯೂಎಸಿ, ಎನ್ಎಸ್ಎಸ್, ರೆಡ್ಕ್ರಾಸ್, ರೋವರ್, ರೇಂಜರ್ ಘಟಕಗಳ ವತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ರಾಜಣ್ಣ ಸಂಕಣ್ಣನವರ್ ಚಾಲನೆ ನೀಡಿದರು.