ಡ್ರಗ್ಸ್, ಕ್ರೈಂ ಕುರಿತ ಜಾಗೃತಿಗಾಗಿವಾಕಥಾನ್‌: ಡಾ.ಪರಮೇಶ್ವರ್‌

KannadaprabhaNewsNetwork |  
Published : Mar 02, 2026, 04:30 AM IST
Police RUN  6 | Kannada Prabha

ಸಾರಾಂಶ

ಮಾದಕ ವಸ್ತುಗಳ ವಿರುದ್ಧ ಜಾಗೃತಿ, ಸೈಬರ್‌ ಕ್ರೈಂ ಕುರಿತ ತಿಳಿವಳಿಕೆಗಳಿಗೆ ಜನರಲ್ಲಿ ಅರಿವು ಮೂಡಿಸಲು ಕಳೆದ ಮೂರು ವರ್ಷಗಳಿಂದಲೂ ರಾಜ್ಯದಲ್ಲಿ ವಾಕಥಾನ್‌ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಪರಮೇಶ್ವರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮಾದಕ ವಸ್ತುಗಳ ವಿರುದ್ಧ ಜಾಗೃತಿ, ಸೈಬರ್‌ ಕ್ರೈಂ ಕುರಿತ ತಿಳಿವಳಿಕೆಗಳಿಗೆ ಜನರಲ್ಲಿ ಅರಿವು ಮೂಡಿಸಲು ಕಳೆದ ಮೂರು ವರ್ಷಗಳಿಂದಲೂ ರಾಜ್ಯದಲ್ಲಿ ವಾಕಥಾನ್‌ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಪರಮೇಶ್ವರ್‌ ಹೇಳಿದರು.

ರಾಜ್ಯ ಪೊಲೀಸ್‌‍ ಇಲಾಖೆ ಹಾಗೂ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌‍ಬಿಐ) ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ 3ನೇ ಆವೃತ್ತಿಯ ಪೊಲೀಸ್‌‍ ರನ್‌ ಸ್ಪರ್ಧೆಗೆ ವಿಧಾನಸೌಧದ ಬೃಹತ್‌ ಮೆಟ್ಟಿಲುಗಳ ಮುಂಭಾಗದಲ್ಲಿ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತದ ಸರ್ಕಾರ ರಾಜ್ಯವನ್ನು ಮಾದಕ ವಸ್ತುಗಳ ವ್ಯಸನ ಮುಕ್ತಗೊಳಿಸುವ ಸಂಕಲ್ಪ ಹೊಂದಿದೆ. ಇದಕ್ಕಾಗಿ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ವಾಕಥಾನ್‌ ಅನ್ನು ಆಯೋಜಿಸುತ್ತಿದೆ. ಇದರ ಉದ್ದೇಶ ಜನಸಮುದಾಯದಲ್ಲಿ ಅದರಲ್ಲಿಯೂ ವಿಶೇಷವಾಗಿ ಯುವಕರಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ, ಸೈಬರ್‌ ಅಪರಾಧ ಕುರಿತು ತಿಳಿವಳಿಕೆ ನೀಡುವುದಾಗಿದೆ. ಮಾದಕ ವಸ್ತುಗಳ ಹಾವಳಿಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಅದನ್ನು ಮಟ್ಟ ಹಾಕಲು ನಿರಂತರ ಪ್ರಯತ್ನ ನಡೆಯುತ್ತಿದೆ. ಒಂದಲ್ಲಾ ಒಂದು ದಿನ ನಾವು ಗುರಿ ತಲುಪುತ್ತೇವೆ ಎಂದು ತಿಳಿಸಿದರು.

ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಡಾ.ಎಂ.ಎ ಸಲೀಂ, ಎಸ್‌ಬಿಐ ಸಿಜಿಎಂ ಜೂಹಿ ಸ್ಮಿತಾ ಸಿನ್ಹಾ, ಡಿಜಿಪಿ ಪ್ರಣವ್‌ ಮೊಹಂತಿ, ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಭಾಗವಹಿಸಿದ್ದರು.

12 ಸಾವಿರ ಜನ ಭಾಗಿ:

ಗೆದ್ದವರಿಗೆ ಬಹುಮಾನ

ಬೆಂಗಳೂರಿನಲ್ಲಿ ನಡೆದ 10 ಕಿ.ಮೀ. ಹಾಗೂ 5 ಕಿ.ಮೀ. ಪೊಲೀಸ್‌ ಓಟದ ಸ್ಪರ್ಧೆಯಲ್ಲಿ 12 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ರಾಜ್ಯಾದ್ಯಂತ ನಡೆದ ಸ್ಫರ್ಧೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಪೊಲೀಸರು, ಎಸ್‌ಬಿಐ ಅಧಿಕಾರಿಗಳು, ಸಿಬ್ಬಂದಿ ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ಪೊಲೀಸ್‌ ಓಟದಲ್ಲಿ ಭಾಗವಹಿಸಿ ವಿಜೇತರಾದವರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಬಹುಮಾನ ವಿತರಿಸಿ ಶುಭ ಹಾರೈಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವತಿಯರ ಮುಂದೆ ಶರ್ಟ್‌ಬಿಚ್ಚಿ ಯುವಕನಿಂದ ಹುಚ್ಚಾಟ
ವಿದ್ಯಾರ್ಥಿನಿ ರೇಪ್‌ ಕೇಸಲ್ಲಿರಾಜಕಾರಣಿ ಪುತ್ರ ಬಂಧನ