ಕನ್ನಡಪ್ರಭ ವಾರ್ತೆ ರಾಯಚೂರು
ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಸೇರಿದ ಸಮಿತಿ ಪದಾಧಿಕಾರಿಗಳು, ಸದಸ್ಯರು, ಮುಖಂಡರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು ನಂತರ ಜಿಲ್ಲಾಡಳಿತದ ಮುಖಾಂತರ ರಾಷ್ಟ್ರಪತಿಗೆ ಮನವಿ ಪತ್ರ ರವಾನಿಸಿದರು.
ಶಿಕ್ಷಣ ತಜ್ಞ ಹಾಗೂ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಹಾಗೂ ವಿದ್ಯಾರ್ಥಿ ಸಂಘಟನೆಗಳು ಹೊಸದಿಲ್ಲಿಯ ಜಂತರ್ ಮಂತರ್ನಲ್ಲಿ ಕಳೆದ 18 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಇದಕ್ಕೆ ಇಡೀ ದೇಶವೇ ಬೆಂಬಲಿಸುತ್ತಿದೆ. ಕೇಂದ್ರ ಸರ್ಕಾರದ ಶಿಕ್ಷಣ ನೀತಿ, ಪದೇಪದೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳಿಗೆ ಆಗಿರುವ ತೊಂದರೆ ಹಾಗೂ ದೇಶದ ಶಿಕ್ಷಣ ವ್ಯವಸ್ಥೆಯ ಹಲವು ಲೋಪ ದೋಷಗಳನ್ನು ಖಂಡಿಸಿ ಮತ್ತು ನೈತಿಕ ಹೊಣೆ ಹೊತ್ತು ಕೇಂದ್ರ ಸರ್ಕಾರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಸೋನಮ್ ವಾಂಗ್ಚುಕ್ ಮತ್ತು ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆಗಳು ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿವೆ. ಆದರೆ ಕೇಂದ್ರ ಸರ್ಕಾರ ಕನಿಷ್ಠ ಸೌಜನ್ಯಕ್ಕಾದರೂ ಧರಣಿ ಸ್ಥಳಕ್ಕೆ ಭೇಟಿ ನೀಡಿ ಧರಣಿ ನಿರತರ ಅಹವಾಲುಗಳನ್ನು ಆಲಿಸಿಲ್ಲ. ಇದು ಸರ್ವಾಧಿಕಾರಿ ಮತ್ತು ಫ್ಯಾಸಿಸ್ಟ್ ಸರ್ಕಾರದ ಶಿಕ್ಷಣ ಮತ್ತು ಜನವಿರೋಧಿ ನೀತಿಗೆ ಜ್ವಲಂತ ಸಾಕ್ಷಿಯಾಗಿದೆ. ಹಾಗಾಗಿ ಸರ್ಕಾರದ ಈ ಬೇಜವಾ ಬ್ದಾರಿಯನ್ನು ವಿರೋಧಿಸಿ, ಸಾರ್ವಜನಿಕ ಶಿಕ್ಷಣ ಬಲಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರಪತಿಗೆ ಬರೆದ ಮನವಿಯಲ್ಲಿ ಒತ್ತಾಯಿಸಲಾಯಿತು.ಈ ಸಂದರ್ಭದಲ್ಲಿ ಸಮಿತಿ ಸಂಚಾಲಕರಾದ ರಾಘವೇಂದ್ರ ಕುಷ್ಟಗಿ, ಚಾಮರಸ ಮಾಲಿಪಾಟೀಲ್, ಎನ್.ದೇವೇಂದ್ರಗೌಡ, ಬಿ.ಬಸವರಾಜ, ಕರಿಯಪ್ಪ ಅಚ್ಚೊಳ್ಳಿ, ಎಂ.ಆರ್.ಭೇರಿ, ಚಂದ್ರಶೇಕರ ನೆಲಹಾಳ, ಬಸವಂತರಾಯ ಗೌಡ, ಬೂದಯ್ಯ ಸ್ವಾಮಿ ಗಬ್ಬೂರು, ವಿದ್ಯಾ ಪಾಟೀಲ್, ಸುಲೋಚನಾ, ಪ್ರಭಾಕರ ಪಾಟೀಲ್ ಇಂಗಳದಾಳ, ಡಿ.ಎಸ್.ಶರಣಬಸವ ಸೇರಿದಂತೆ ಸಂಘಟನೆಗಳ ಮುಖಂಡರು ಇದ್ದರು.
ರಾಯಚೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನೀಟ್ ಪರೀಕ್ಷೆಯಲ್ಲಿ ಪಾರದರ್ಶಕತೆ ಹಾಗೂ ದಕ್ಷತೆಯಿಂದ ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ವಿದ್ಯಾರ್ಥಿಗಳ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿರುವ ಕೇಂದ್ರದವರು ಮಾನವೀಯ ಸಂವೇದನೆಯನ್ನೇ ಕಳೆದುಕೊಂಡಿದ್ದಾರೆ, ಅಕ್ರಮದ ಕುರಿತು ನೈತಿಕತೆ ತೋರದ ಬಿಜೆಪಿ ನಡೆಯು ಖಂಡನೀಯವಾಗಿದೆ ಎಂದು ವಿದ್ಯಾರ್ಥಿ ಯುವಜನ ಒಕ್ಕೂಟದ ಸಂಚಾಲಕ ಶರಣುಕುಮಾರ ಆರೋಪಿಸಿದರು.
ಕಳೆದ 25 ದಿನಗಳಿಂದ ಕಾಕರೋಚ್ ಪಾರ್ಟಿ ನೇತೃತ್ವದಲ್ಲಿ ಹೋರಾಟಗಾರ ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಕನಿಷ್ಟ ಸ್ಪಂದಿಸುವ ಕೆಲಸಮಾಡಿಲ್ಲ. ಸಂವೇದನೆಯನ್ನೇ ಕಳೆದುಕೊಂಡಿದ್ದರಿಂದ ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹವನ್ನು ಕೈ ಬಿಟ್ಟು ಹೋರಾಟವನ್ನು ತೀವ್ರಗೊಳಿಸಬೇಕು ಎಂದರು.
ಇಂದು ಸಿಂಧನೂರಿನಲ್ಲಿ ಧರಣಿ ಸತ್ಯಾಗ್ರಹ