ಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯದ ವಿಜಯಪುರ, ಧಾರವಾಡ, ಹಾವೇರಿ, ಬೀದರ್, ಮಂಡ್ಯ ಸೇರಿದಂತೆ ಅನೇಕ ಜಿಲ್ಲೆಗಳ ರೈತರ ಜಮೀನುಗಳ ಆರ್ಟಿಸಿ ಕಲಂ ೧೧ರಲ್ಲಿ ವಕ್ಫ್ ಬೋರ್ಡ್ ಹೆಸರು ಸೇರ್ಪಡೆಗೊಂಡು ದೊಡ್ಡ ಅವಾಂತರ, ಗೊಂದಲವನ್ನು ಸೃಷ್ಟಿಸಿದೆ. ಇದರಿಂದ ರೈತರು ಹಾಗೂ ಸಾಮಾನ್ಯ ಜನರು ಆತಂಕಗೊಂಡಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತುರ್ತು ಸಚಿವ ಸಂಪುಟ ಸಭೆ ಕರೆದು ಚರ್ಚಿಸಿ ತಕ್ಷಣವೇ ರಾಜ್ಯದ ಯಾವುದೇ ರೈತರ ಆಸ್ತಿಗಳ ಮೇಲೆ ವಕ್ಫ್ ಹಾಗೂ ಇತರೆ ಸಂಸ್ಥೆಗ ಹೆಸರು ಬರದಂತೆ ನೋಡಿಕೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ತುರ್ತು ಸಂದೇಶ ರವಾನಿಸುವಂತೆ ಆಗ್ರಹಪಡಿಸಿದರು.೧೯೫೪ರಲ್ಲಿ ಸಂಸತ್ತಿನ ಅಂಗೀಕಾರ ಪಡೆದು ೧೯೯೫ ಹಾಗೂ ೨೦೧೩ರಲ್ಲಿ ತಿದ್ದುಪಡಿಗೊಂಡಿರುವ ವಕ್ಫ್ ಕಾಯಿದೆ ಸಾಕಷ್ಟು ಬಲಶಾಲಿಯಾಗಿದೆ. ವಕ್ಫ್ ನ್ಯಾಯ ಮಂಡಳಿ ಯಾವುದೇ ಆಸ್ತಿಯನ್ನು ತನ್ನದೆಂದು ಘೋಷಿಸುವುದಾದರೆ ಭಾರತ ಅಳವಡಿಸಿಕೊಂಡಿರುವ ಸಂವಿಧಾನಕ್ಕೆ ಬೆಲೆ ಎಲ್ಲಿದೆ, ಸ್ವತಂತ್ರ ಭಾರತದ ಅರ್ಥವೇನು, ನ್ಯಾಯಾಂಗಕ್ಕೆ ಇರುವ ಗೌರವವಾದರೂ ಏನು ಎಂದು ಪ್ರಶ್ನಿಸಿದರು.
ಸರ್ಕಾರ ಈ ವಿಚಾರ ಮಂಡಿಸಲು ವಿಫಲವಾದಲ್ಲಿ ಮುಂದಿನ ದಿನಗಳಲ್ಲಿ ಭಾರತೀಯ ಕಿಸಾನ್ ಸಂಘವು ರಾಜ್ಯದ ಮತ್ತು ಜಿಲ್ಲೆಯ ರೈತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ಎಲ್ಲಾ ಸಂಘಟನೆಗಳ ಮುಖಂಡರ ಸಭೆ ಕರೆದು ಚರ್ಚಿಸಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.