ಕನ್ನಡಪ್ರಭ ವಾರ್ತೆ ದಾವಣಗೆರೆ
ದೇಶದ ಅಲ್ಪಸಂಖ್ಯಾತ ಸಮುದಾಯದವರ ಹಕ್ಕುಗಳನ್ನು ಕಸಿದುಕೊಳ್ಳುವ ಉದ್ದೇಶದಿಂದಲೇ ವಕ್ಫ್ ತಿದ್ದುಪಡಿ ಕಾನೂನು ಜಾರಿಗೊಳಿಸಲಾಗಿದೆ. ಇದರ ವಿರುದ್ಧ ಸಂಘಟಿತ ಹೋರಾಟ ರೂಪಿಸಬೇಕಾಗಿದೆ. ಒಂದು ಧರ್ಮದವರನ್ನು ಗುರಿಯಾಗಿಸಿ ನಡೆಸಿರುವ ವ್ಯವಸ್ಥಿತ ದಾಳಿ ಇದು ಎಂದು ಪ್ರತಿಕ್ರಿಯಿಸಿದ್ದಾರೆ.
ಆರ್ಎಸ್ಎಸ್, ಬಿಜೆಪಿ ಮತ್ತು ಮಿತ್ರಪಕ್ಷಗಳಿಂದ ಸಂವಿಧಾನದ ಮೇಲಿನ ಈ ದಾಳಿ ಇಂದು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ. ಆದರೆ, ಭವಿಷ್ಯದಲ್ಲಿ ಇತರ ಸಮುದಾಯಗಳನ್ನು ಗುರಿಯಾಗಿಸಿಕೊಳ್ಳಲು ಒಂದು ಪೂರ್ವ ನಿದರ್ಶನವಾಗಿದೆ. ಕಾಂಗ್ರೆಸ್ ವಕ್ಫ್ ತಿದ್ದುಪಡಿ ಮಸೂದೆ ಬಲವಾಗಿ ವಿರೋಧಿಸುತ್ತದೆ. ಏಕೆಂದರೆ, ಇದು ಭಾರತದ ಕಲ್ಪನೆ ಮೇಲೆಯೇ ನಡೆದ ದಾಳಿಯಾಗಿದೆ ಎಂದು ಹೇಳಿಕೆಯಲ್ಲಿ ಆರೋಪಿಸಿದ್ದಾರೆ.- - -
-3ಕೆಡಿವಿಜಿ45: ಸೈಯದ್ ಖಾಲಿದ್ ಅಹ್ಮದ್