ರಸ್ತೆ ಒತ್ತುವರಿ ತೆರವಿಗೆ ಅಧಿಕಾರಿಗಳ ಗಡುವು

KannadaprabhaNewsNetwork |  
Published : Apr 16, 2025, 12:38 AM IST
ಪೋಟೊ15.2: ಕುಷ್ಟಗಿ ತಾಲೂಕಿನ ಬಳೂಟಗಿ ಗ್ರಾಮದಲ್ಲಿ ಸ್ಥಗಿತಗೊಂಡ ಸಿಸಿ ರಸ್ತೆ  ಕಾಮಗಾರಿಯ ಸ್ಥಳಕ್ಕೆ ತಾಪಂ ಹಾಗೂ ಗ್ರಾಪಂ ಅಧಿಕಾರಿಗಳು ಭೇಟಿ ನೀಡಿ ಸರ್ವೆ ಕಾರ್ಯವನ್ನು ಮಾಡಿದರು. ಏ.12ರಂದು ಕನ್ನಡಪ್ರಭದಲ್ಲಿ ಪ್ರಕಟವಾದ ವರದಿ. | Kannada Prabha

ಸಾರಾಂಶ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ₹ 40 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆಯ ಕಾಮಗಾರಿಗೆ ನಾಲ್ಕು ತಿಂಗಳ ಹಿಂದೆ ಚಾಲನೆ ನೀಡಲಾಗಿತ್ತು. ಆದರೆ, ಕೆಲ ಪ್ರಭಾವಿ ವ್ಯಕ್ತಿಗಳು ಮಾಡಿಕೊಂಡ ರಸ್ತೆ ಒತ್ತುವರಿ ತೆರವುಗೊಳಿಸದೆ ಇರುವುದರಿಂದ ಕಾಮಗಾರಿ ಸ್ಥಗಿತವಾಗಿತ್ತು.

ಕುಷ್ಟಗಿ:

ತಾಲೂಕಿನ ಬಳೂಟಗಿ ಗ್ರಾಮದಲ್ಲಿ ಸ್ಥಗಿತಗೊಂಡ ಸಿಸಿ ರಸ್ತೆ ಕಾಮಗಾರಿ ಸ್ಥಳಕ್ಕೆ ತಾಲೂಕು ಪಂಚಾಯಿತಿ ಅಧಿಕಾರಿ ಸಂಗಪ್ಪ ನಂದಾಪೂರು ಹಾಗೂ ಶಿರಗುಂಪಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮಣ್ಣ ದಾಸರ ಭೇಟಿ ನೀಡಿ ರಸ್ತೆ ಒತ್ತುವರಿಗೊಂಡ ಸ್ಥಳದ ಸರ್ವೇ ಕಾರ್ಯ ಮಾಡಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ₹ 40 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆಯ ಕಾಮಗಾರಿಗೆ ನಾಲ್ಕು ತಿಂಗಳ ಹಿಂದೆ ಚಾಲನೆ ನೀಡಲಾಗಿತ್ತು. ಆದರೆ, ಕೆಲ ಪ್ರಭಾವಿ ವ್ಯಕ್ತಿಗಳು ಮಾಡಿಕೊಂಡ ರಸ್ತೆ ಒತ್ತುವರಿ ತೆರವುಗೊಳಿಸದೆ ಇರುವುದರಿಂದ ಕಾಮಗಾರಿ ಸ್ಥಗಿತವಾಗಿತ್ತು. ಈ ಕುರಿತು ಕನ್ನಡಪ್ರಭ ಏ. 12ರಂದು ಒತ್ತುವರಿ ತೆರವಿಗೆ ಮೀನಮೇಷ, ರಸ್ತೆ ಕಾಮಗಾರಿ ಸ್ಥಗಿತ ಎಂಬ ತಲೆಬರಹದಡಿ ಸಮಗ್ರವಾದ ವರದಿ ಪ್ರಕಟಿಸಿತ್ತು.

ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಮಂಗಳವಾರ ಬಳೂಟಗಿ ಗ್ರಾಮಕ್ಕೆ ಭೇಟಿ ನೀಡುವ ಮೂಲಕ ಸಿಸಿ ರಸ್ತೆ ಕಾಮಗಾರಿ ನಡೆಯುವ ಸ್ಥಳದಲ್ಲಿ ಒತ್ತುವರಿ ಕುರಿತು ಸರ್ವೇ ಮಾಡಿದರು. ನಂತರ ಒತ್ತುವರಿ ಮಾಡಿಕೊಂಡ ಮನೆಗಳ ಮಾಲೀಕರಿಗೆ ಗ್ರಾಮದ ಅಭಿವೃದ್ಧಿಗಾಗಿ ಸಿಸಿ ರಸ್ತೆ ಕಾಮಗಾರಿ ಕೈಗೊಂಡಿದ್ದು ಗ್ರಾಮಸ್ಥರ ಸಹಕಾರ ಅಗತ್ಯವಾಗಿದೆ. ಎಲ್ಲರು ಸಹಕಾರ ನೀಡಿದಾಗ ಮಾತ್ರ ಅಭಿವೃದ್ಧಿ ಕಾರ್ಯ ನಡೆಯಲು ಸಾಧ್ಯವಾಗುತ್ತದೆ. ಆದ ಕಾರಣ ಒತ್ತುವರಿ ಮಾಡಿಕೊಂಡವರು ಸ್ವಯಂಪ್ರೇರಿತರಾಗಿ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಾವೇ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ತೆರವುಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಬಳೂಟಗಿ ಗ್ರಾಮಕ್ಕೆ ಭೇಟಿ ನೀಡಿ ರಸ್ತೆ ಒತ್ತುವರಿ ಮಾಡಿಕೊಂಡ ಮನೆ ಮಾಲೀಕರಿಗೆ ತಿಳಿವಳಿಕೆ ನೀಡಲಾಗಿದೆ. ಇನ್ನೂ ಮುರ್ನಾಲ್ಕು ದಿನಗಳಲ್ಲಿ ಒತ್ತುವರಿ ತೆರವುಗೊಳಿಸದೆ ಹೋದರೆ ನಾವೇ ಮುಂದೆ ನಿಂತು ಜೆಸಿಬಿ ಮೂಲಕ ತೆರವುಗೊಳಿಸುತ್ತೇವೆ.

ಸಂಗಪ್ಪ ನಂದಾಪುರು ತಾಲೂಕು ಪಂಚಾಯಿತಿ ಅಧಿಕಾರಿ ಕುಷ್ಟಗಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌