ತ್ಯಾಜ್ಯ ಜಾಗೃತಿ: ಮುಂಡಾಜೆ ಗ್ರಾ.ಪಂ. ವ್ಯಾಪ್ತಿ ಸಿಸಿ ಕೆಮರಾ ಅಳವಡಿಕೆ

KannadaprabhaNewsNetwork |  
Published : Mar 05, 2025, 12:32 AM IST
ಸಿಸಿ | Kannada Prabha

ಸಾರಾಂಶ

ಮುಂಡಾಜೆ ಗ್ರಾಪಂ ವ್ಯಾಪ್ತಿಯಲ್ಲಿ ನೇತ್ರಾವತಿ, ಮೃತ್ಯುಂಜಯ ನದಿ, ರಾಷ್ಟ್ರೀಯ ಹೆದ್ದಾರಿ, ಮುಂಡಾಜೆ- ಕಾಪು ರಕ್ಷಿತಾರಣ್ಯ ಇತ್ಯಾದಿ ಇದ್ದು ಇಲ್ಲಿನ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಗಳನ್ನು ಸ್ಥಾಪಿಸಲಾಗಿದೆ. ಪ್ರಥಮ ಹಂತದಲ್ಲಿ ಕಾಪು ಕಿಂಡಿ ಅಣೆಕಟ್ಟು, ದಿಡುಪೆ ರಸ್ತೆ, ನಿಡಿಗಲ್ ನೇತ್ರಾವತಿ ನದಿ, ಸೇತುವೆ, ಸೀಟು ಅರಣ್ಯ ಪ್ರದೇಶದ ಅಲ್ಲಲ್ಲಿ ಸಿಸಿ ಕ್ಯಾಮೆರಾಗಳನ್ನು ಹಾಕಲಾಗಿದೆ.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ತ್ಯಾಜ್ಯ ಎಸೆಯುವ ಹಾವಳಿ ಹೆಚ್ಚಳ ಹಿನ್ನೆಲೆಯಲ್ಲಿ ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

ಮುಂಡಾಜೆ ಗ್ರಾಪಂ ವ್ಯಾಪ್ತಿಯಲ್ಲಿ ನೇತ್ರಾವತಿ, ಮೃತ್ಯುಂಜಯ ನದಿ, ರಾಷ್ಟ್ರೀಯ ಹೆದ್ದಾರಿ, ಮುಂಡಾಜೆ- ಕಾಪು ರಕ್ಷಿತಾರಣ್ಯ ಇತ್ಯಾದಿ ಇದ್ದು ಇಲ್ಲಿನ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಗಳನ್ನು ಸ್ಥಾಪಿಸಲಾಗಿದೆ.

ಪ್ರಥಮ ಹಂತದಲ್ಲಿ ಕಾಪು ಕಿಂಡಿ ಅಣೆಕಟ್ಟು, ದಿಡುಪೆ ರಸ್ತೆ, ನಿಡಿಗಲ್ ನೇತ್ರಾವತಿ ನದಿ, ಸೇತುವೆ, ಸೀಟು ಅರಣ್ಯ ಪ್ರದೇಶದ ಅಲ್ಲಲ್ಲಿ ಸಿಸಿ ಕ್ಯಾಮೆರಾಗಳನ್ನು ಹಾಕಲಾಗಿದೆ.

ಇಲ್ಲಿನ ನದಿಗಳು, ಅರಣ್ಯ, ಸೇತುವೆ, ಕಿಂಡಿ ಅಣೆಕಟ್ಟುಗಳ ಪ್ರದೇಶದಲ್ಲಿ ತ್ಯಾಜ್ಯ ತಂದು ಹಾಕುವುದು ಸಾಮಾನ್ಯವಾಗಿದೆ. ಪಂಚಾಯಿತಿಯ ಹೆಚ್ಚಿನ ಸಂಪನ್ಮೂಲ ತ್ಯಾಜ್ಯ ವಿಲೇವಾರಿಗೆ ವ್ಯಯವಾಗುತ್ತಿದೆ.

ಸ್ಥಳೀಯ ಸಹಿತ ಇತರ ಗ್ರಾಮಗಳ ಪೇಟೆಗಳಿಂದ ಮುಂಡಾಜೆ ಗ್ರಾ.ಪಂ. ವ್ಯಾಪ್ತಿಯ ಹಲವೆಡೆ ತ್ಯಾಜ್ಯ ತಂದು ಹಾಕುವುದು ಅಭ್ಯಾಸವಾಗಿದೆ. ಅಲ್ಲದೆ ಇಲ್ಲಿನ ಸೇತುವೆ, ನದಿ ಪ್ರದೇಶಗಳಲ್ಲಿ ಸಾಕಷ್ಟು ಅನಗತ್ಯ ಚಟುವಟಿಕೆಗಳು ಕಂಡುಬರುತ್ತವೆ. ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.

ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳು ಪಂಚಾಯಿತಿ ವ್ಯವಸ್ಥೆಗೆ ಹಾಗೂ ಸಂಬಂಧ ಪಟ್ಟ ವ್ಯಕ್ತಿಗಳ ಮೊಬೈಲ್ ಗಳಲ್ಲಿ ದಾಖಲಾಗುವುದರಿಂದ ಅನಗತ್ಯ ಚಟುವಟಿಕೆ ನಡೆಸುವವರನ್ನು ಪತ್ತೆಹಚ್ಚಲು ಸುಲಭವಾಗಿದೆ.

ಮುಂದಿನ ಹಂತದಲ್ಲಿ ಇಲ್ಲಿನ ರುದ್ರಭೂಮಿ ಸಹಿತ ಇನ್ನಷ್ಟು ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವ ಕುರಿತು ಯೋಚಿಸಲಾಗಿದೆ ಎಂದು ಗ್ರಾ.ಪಂ. ಅಧ್ಯಕ್ಷ ಗಣೇಶ್ ಬಂಗೇರ ಹಾಗೂ ಪಿಡಿಒ ಗಾಯತ್ರಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ