ಕಾವೇರಿ ನದಿಗೆ ತ್ಯಾಜ್ಯ ನೀರು: ಗುಡ್ಡೆಹೊಸೂರು ಗ್ರಾ.ಪಂ.ನಿಂದ ಪರಿಶೀಲನೆ

KannadaprabhaNewsNetwork |  
Published : Sep 09, 2025, 01:01 AM IST
ಚಿತ್ರ :  8ಎಂಡಿಕೆ3 : ಗುಡ್ಡೆಹೊಸೂರು ಗ್ರಾಪಂ ಪ್ರಮುಖರಿಂದ ಪರಿಶೀಲನೆ.  | Kannada Prabha

ಸಾರಾಂಶ

ಮಲಿನ ನೀರನ್ನು ನೇರವಾಗಿ ಚರಂಡಿಗಳ ಮೂಲಕ ನದಿಗಳಿಗೆ ಹರಿಸುತ್ತಿರುವ ಉದ್ದಿಮೆದಾರರಿಗೆ ಲೈಸೆನ್ಸ್ ರದ್ದು ಪಡಿಸುವ ಎಚ್ಚರಿಕೆ ನೀಡಲಾಯಿತು. ಹಾಗೂ 15 ದಿನಗಳ ಕಾಲಾವಕಾಶವನ್ನು ನೀಡಿದ್ದು, ಈ ಅವಧಿಯಲ್ಲಿ STP ನಿರ್ಮಾಣ ಮಾಡಿ ನೀರನ್ನು ಸಂಸ್ಕರಿಸಿ ಪುನರ್ಬಳಕೆ ಮಾಡುವ ಬಗ್ಗೆ ತಿಳಿ ಹೇಳಲಾಯಿತು.

ಕನ್ನಡಪ್ರಭ ವಾರ್ತೆ ಗುಡ್ಡೆಹೊಸೂರು

ಕಾವೇರಿ ನದಿ ತೀರದ ಹೋಟೆಲ್, ಲಾಡ್ಜ್, ಹೋಂಸ್ಟೇ ಹಾಗೂ ರೆಸಾರ್ಟ್‌ಗಳಿಂದ ತ್ಯಾಜ್ಯ ನೀರನ್ನು ಸಂಸ್ಕರಿಸದೆ ನೇರವಾಗಿ ನದಿಗೆ ಬಿಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸೋಮವಾರ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರು ಪಂಚಾಯಿತಿ ವ್ಯಾಪ್ತಿಯ ರಸಲ್ಪೂರ, ಚಿಕ್ಕಬೆಟಗೇರಿ ಹಾಗೂ ಬಸವನಹಳ್ಳಿ ಗ್ರಾಮದ ವಾಣಿಜ್ಯ ಉದ್ದಿಮೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಮಲಿನ ನೀರನ್ನು ನೇರವಾಗಿ ಚರಂಡಿಗಳ ಮೂಲಕ ನದಿಗಳಿಗೆ ಹರಿಸುತ್ತಿರುವ ಉದ್ದಿಮೆದಾರರಿಗೆ ಲೈಸೆನ್ಸ್ ರದ್ದು ಪಡಿಸುವ ಎಚ್ಚರಿಕೆ ನೀಡಲಾಯಿತು. ಹಾಗೂ 15 ದಿನಗಳ ಕಾಲಾವಕಾಶವನ್ನು ನೀಡಿದ್ದು, ಈ ಅವಧಿಯಲ್ಲಿ STP ನಿರ್ಮಾಣ ಮಾಡಿ ನೀರನ್ನು ಸಂಸ್ಕರಿಸಿ ಪುನರ್ಬಳಕೆ ಮಾಡುವ ಬಗ್ಗೆ ತಿಳಿ ಹೇಳಲಾಯಿತು.

ವಾಣಿಜ್ಯ ಸಂಸ್ಥೆಗಳು ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸುತ್ತಿರುವುದನ್ನು ಈ ಸಂದರ್ಭದಲ್ಲಿ ಖಾತ್ರಿಪಡಿಸಲಾಯಿತು. ಅಲ್ಲದೆ ಗ್ರಾಮ ಪಂಚಾಯಿತಿ ಅನುಮತಿ ಇಲ್ಲದೆ ಅನಧಿಕೃತವಾಗಿ ವಾಣಿಜ್ಯ ವ್ಯವಹಾರಗಳನ್ನು ನಡೆಸುತ್ತಿರುವ ಉದ್ದಿಮೆದಾರರಿಗೆ ಹಾಗೂ ವಾರ್ಷಿಕ ತೆರಿಗೆ ಪಾವತಿಸದಿರುವ ವರ್ತಕರಿಗೆ ನೋಟಿಸ್ ಜಾರಿ ಮಾಡಲಾಯಿತು.

ಈ ಸಂದರ್ಭ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್ ಎಂ.ಆರ್. ಅವರೊಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸೌಮ್ಯ, ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಪ್ಪ, ಪ್ರದೀಪ್, ಉಮಾ, ಚಿದಾನಂದ, ಸುಶೀಲಾ, ಯಶೋದಾ, ಸರ್ವ ಮಂಗಳ, ನಿತ್ಯಾನಂದ, ಗಂಗಮ್ಮ ಹಾಗೂ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕುಮಾರಸ್ವಾಮಿ, ಕರವಸೂಲಿಗಾರ ಸಮಂತ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ