ಶ್ರೀ ಕ್ಷೇತ್ರ ಕೂಡ್ಲಿ ಗ್ರಾಮವು ಐತಿಹಾಸಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆ ಹೊಂದಿದೆ. ಭಕ್ತರು ಹಾಗೂ ಪ್ರವಾಸಿಗರು ಸಂಗಮ ಸ್ಥಳದಲ್ಲಿ ಬಟ್ಟೆ, ಅಸ್ಥಿ ವಿಸರ್ಜನೆ ನಂತರದ ತ್ಯಾಜ್ಯ ವಸ್ತುಗಳನ್ನು ನದಿ ಬಿಟ್ಟು, ಪಾವಿತ್ರ್ಯತೆ ಹಾಳು ಮಾಡಬಾರದು. ಪರಿಸರಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಪರೋಪಕಾರಂ ಕುಟುಂಬ ಸಂಸ್ಥೆ ಮುಖ್ಯಸ್ಥ ಎನ್.ಎಂ.ಶ್ರೀಧರ್ ಕೂಡ್ಲಿಯಲ್ಲಿ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಹೊಳೆಹೊನ್ನೂರು
ಶ್ರೀ ಕ್ಷೇತ್ರ ಕೂಡ್ಲಿ ಗ್ರಾಮವು ಐತಿಹಾಸಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆ ಹೊಂದಿದೆ. ಭಕ್ತರು ಹಾಗೂ ಪ್ರವಾಸಿಗರು ಸಂಗಮ ಸ್ಥಳದಲ್ಲಿ ಬಟ್ಟೆ, ಅಸ್ಥಿ ವಿಸರ್ಜನೆ ನಂತರದ ತ್ಯಾಜ್ಯ ವಸ್ತುಗಳನ್ನು ನದಿ ಬಿಟ್ಟು, ಪಾವಿತ್ರ್ಯತೆ ಹಾಳು ಮಾಡಬಾರದು. ಪರಿಸರಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಪರೋಪಕಾರಂ ಕುಟುಂಬ ಸಂಸ್ಥೆ ಮುಖ್ಯಸ್ಥ ಎನ್.ಎಂ.ಶ್ರೀಧರ್ ಹೇಳಿದರು.
ಪಟ್ಟಣ ಸಮೀಪದ ಕೂಡ್ಲಿ ಗ್ರಾಮದ ತುಂಗಭದ್ರಾ ನದಿ ಸಂಗಮ ಸ್ಥಳದದಲ್ಲಿ ಶಿವಮೊಗ್ಗದ ಪರೋಪಕಾರಂ ಕುಟುಂಬ ಸಂಸ್ಥೆ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯದಲ್ಲಿ ಶ್ರಮದಾನ ಬಳಿಕ ಅವರು ಮಾತನಾಡಿದರು.
ಸಂಗಮ ಸ್ಥಳದಲ್ಲಿ ಪ್ರತಿ ವರ್ಷ ಟನ್ಗಟ್ಟಲೆ ನದಿಯಲ್ಲಿ ತ್ಯಾಜ್ಯ ಸೇರಿ, ನೀರು ಮಲೀನ ಆಗುತ್ತಿದೆ. ಇದನ್ನು ತಡೆಗಟ್ಟಲು ಜನಜಾಗೃತಿ ಅಗತ್ಯ. ನಾವು ಪಾಲಿಸುವ ಸಂಪ್ರದಾಯಗಳು ಪರಿಸರಕ್ಕೆ ಮಾರಕ ಆಗಬಾರದು ಎಂದು ತಿಳಿಸಿದರು.
ಲೆಕ್ಕಪರಿಶೋಧಕ ಕೃಷ್ಣಮೂರ್ತಿ ಮಾತನಾಡಿ, ಬೇಸಿಗೆ ಸಮಯದಲ್ಲಿ ನದಿ ಸ್ವಚ್ಛತೆ ಮಾಡುವ ಜೊತೆಗೆ ನದಿಯ ಪಾವಿತ್ರ್ಯತೆ ಬಗ್ಗೆ ಜನ ಜಾಗೃತಿ ಮೂಡಿಸಲು ಪರೋಪಕಾರಂ ಕುಟುಂಬ ನಿರಂತರವಾಗಿ ಪ್ರಯತ್ನಿಸುತ್ತಿದೆ. ನದಿ ಸ್ವಚ್ಛತೆಯಿಂದ ಪುಣ್ಯ ಹಾಗೂ ಉಲ್ಲಾಸ ಪ್ರಾಪ್ತಿ ಆಗುತ್ತದೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.