ವಿವೇಕ ಬ್ರಿಗೇಡ್‌ದಿಂದ ನೀರಿನ ಅರವಟ್ಟಿಗೆ ವ್ಯವಸ್ಥೆ

KannadaprabhaNewsNetwork |  
Published : Mar 28, 2024, 12:46 AM IST
೨೬ಬಿಎಸ್ವಿ೦೧- ಬಸವನಬಾಗೇವಾಡಿಯ ಬಸವೇಶ್ವರ ದೇವಸ್ಥಾನದ ಮುಂಭಾಗ ಮಂಗಳವಾರ ವಿವೇಕ ಬ್ರಿಗೇಡ್ ಸಂಘಟನೆಯಿಂದ ಮಾಡಲಾಗಿರುವ ಅರವಟ್ಟಿಗೆಗೆ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು. | Kannada Prabha

ಸಾರಾಂಶ

ಬಸವನಬಾಗೇವಾಡಿ: ಪಟ್ಟಣದ ಬಸವೇಶ್ವರ ದೇವಸ್ಥಾನದ ಮುಂಭಾಗ ಮಂಗಳವಾರ ವಿವೇಕ ಬ್ರಿಗೇಡ್ ಸಂಘಟನೆಯ ಪದಾಧಿಕಾರಿಗಳು ಬೇಸಿಗೆ ಕಾಲದಲ್ಲಿ ಜನರಿಗೆ ಕುಡಿಯುವ ನೀರಿನ ಅರವಟ್ಟಿಗೆ ವ್ಯವಸ್ಥೆ ಮಾಡಿದ್ದಾರೆ. ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಪಟ್ಟಣದ ಬಸವೇಶ್ವರ ದೇವಸ್ಥಾನದ ಮುಂಭಾಗ ಮಂಗಳವಾರ ವಿವೇಕ ಬ್ರಿಗೇಡ್ ಸಂಘಟನೆಯ ಪದಾಧಿಕಾರಿಗಳು ಬೇಸಿಗೆ ಕಾಲದಲ್ಲಿ ಜನರಿಗೆ ಕುಡಿಯುವ ನೀರಿನ ಅರವಟ್ಟಿಗೆ ವ್ಯವಸ್ಥೆ ಮಾಡಿದ್ದಾರೆ. ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಬೇಸಿಗೆ ಸಂದರ್ಭದಲ್ಲಿ ಪಟ್ಟಣಕ್ಕೆ ಬರುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವುದು ಶ್ಲಾಘನೀಯ. ಇದೊಂದು ಉತ್ತಮ ಕಾರ್ಯ. ಜನರು ನೀರಿನ ಮಹತ್ವ ಅರಿತು ಅರವಟ್ಟಿಗೆಯನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಬೇಸಿಗೆಯಲ್ಲಿ ಬಿಸಿಲಿನ ದಾಹ ನೀಗಿಸಲು ಅರವಟ್ಟಿಗೆ ತುಂಬಾ ಸಹಕಾರಿಯಾಗುತ್ತದೆ. ವಿವೇಕ ಬ್ರಿಗೇಡ್‌ದವರು ಅರವಟ್ಟಿಗೆಯಿಂದ ಜನರು ನೀರು ತೆಗೆದುಕೊಳ್ಳುವಾಗ ರಸ್ತೆ ಬಾರದಂತೆ ನೋಡಿಕೊಳ್ಳವ ಜೊತೆಗೆ ಅದರ ಕೆಳಗೆ ನೀರಿನ ತೊಟ್ಟಿಯನ್ನು ಇಟ್ಟಿರುವುದು ಜಾನುವಾರುಗಳು ನೀರು ಕುಡಿಯಲು ಅನುಕೂಲವಾಗಿದೆ. ಇದರ ಪಕ್ಕದಲ್ಲಿರುವ ಗಿಡಗಳಲ್ಲಿ ಮಣ್ಣಿನ ಪರಾಣಿಯನ್ನು ನೇತು ಹಾಕಿ ಅದರಲ್ಲಿ ನೀರು ಹಾಕಿರುವುದು ಪಕ್ಷಿಗಳಿಗೆ ನೀರು ಕುಡಿಯಲು ತುಂಬಾ ಅನುಕೂಲವಾಗುವಂತೆ ಮಾಡಿರುವ ವ್ಯವಸ್ಥೆ ಸಹ ಒಳ್ಳೆಯದು. ಈ ಸಲ ಕಳೆದ ವರ್ಷಕ್ಕಿಂತ ಬಿಸಿಲು ಹೆಚ್ಚಾಗಿದೆ. ಜನರು ನೀರು ಪೋಲಾಗದಂತೆ ಬಳಕೆ ಮಾಡುವುದು ಅಗತ್ಯವಿದೆ. ನೀರಿನ ಮಹತ್ವ ಅರಿತು ಅದರ ಬಳಕೆ ಮಾಡಬೇಕೆಂದರು.

ಈ ಸಂದರ್ಭದಲ್ಲಿ ವಿವೇಕ ಬಿಗ್ರೇಡ್‌ದ ವಿನುತ ಕಲ್ಲೂರ,ರವಿಗೌಡ ಚಿಕ್ಕೊಂಡ, ಸಚೀನ ಕಲ್ಲೂರ, ಶಿವಾನಂದ ತೋಳನೂರ, ಸಂಗಮೇಶ ಹುಜರತಿ, ಪ್ರಭಾಕರ ಖೇಡದ, ಕಾಶೀನಾಥ ಅವಟಿ, ಮಹೀಂದ್ರ ಕೋಮಾವತ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಯ್ಯಪ್ಪನ ಮಾಲೆ ಧರಿಸಿದ ಬಾಲಕನ ಮೇಲೆ ಶಿಕ್ಷಕ ಹಲ್ಲೆ!
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ