ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ವಿವಿಧ ಬಗೆಯ ಹೂವು ಮತ್ತು ಹಣ್ಣಿನ ಸಸಿಗಳನ್ನು ನೆಟ್ಟು ನೀರೆರೆದು ಮಾತನಾಡಿ, ವಿಶ್ವದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗಾಗಿ ಮಹಾಯುದ್ಧವು ನಡೆದರೆ ನಾವು ಆಶ್ಚರ್ಯ ಪಡಬೇಕಾಗಿಲ್ಲ ಎಂದರು.
ನೀರು ಚಿನ್ನಕ್ಕಿಂತಲೂ ಶ್ರೇಷ್ಠ. ಮಾನವರಾದ ನಾವು ಸೇರಿದಂತೆ ಪಶು ಪಕ್ಷಿಗಳು ಜೀವಸಂಕುಲಗಳು ನೀರಿಲ್ಲದಿದ್ದರೆ ಜೀವನ ನಡೆಸುವುದೇ ಕಷ್ಟವಾಗಲಿದೆ. ಆದ್ದರಿಂದ ನೀರನ್ನು ವ್ಯರ್ಥವಾಗಿ ಪೋಲು ಮಾಡದೇ ಎಚ್ಚರಿಕೆಯಿಂದ ಬಳಸಬೇಕು ಎಂದು ಮನವಿ ಮಾಡಿದರು.ಜೆಎಂಎಫ್ ಸಿ ಸಿವಿಲ್ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧಿಶರಾದ ಸುಧೀರ್, ಅಪರ ಸಿವಿಲ್ ನ್ಯಾಯಾಧಿಶರಾದ ದೇವರಾಜು, ಅರ್ಪಿತಾ, ತಾಲೂಕು ವಲಯ ಅರಣ್ಯ ಅಧಿಕಾರಿ ಅನಿತಾ ಸಸಿಗಳನ್ನು ನೆಟ್ಟು ನೀರೆರೆದರು.
ಈ ವೇಳೆ ಸಹಾಯಕ ಸರ್ಕಾರಿ ಅಭಿಯೋಜಕ ಸುರೇಂದ್ರ, ವಕೀಲರ ಸಂಘದ ಅಧ್ಯಕ್ಷ ನಾಗೇಗೌಡ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸಾಧುಗೋನಹಳ್ಳಿ ಮಂಜೇಗೌಡ, ವಲಯ ಅರಣ್ಯಾಧಿಕಾರಿ ಅನಿತ ಸೇರಿದಂತೆ ವಕೀಲರ ಸಂಘದ ಪದಾಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.