ಕನ್ನಡಪ್ರಭ ವಾರ್ತೆ ಬೆಂಗಳೂರು
ಕಳೆದ ಕೆಲವು ತಿಂಗಳುಗಳಿಂದ ಎಸ್ಸಿ, ಎಸ್ಟಿ ವಿದ್ಯಾರ್ಥಿನಿಯರ ಹಾಸ್ಟೇಲ್ನಲ್ಲಿ ಪದೇ ಪದೇ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಬಿಸಿ ನೀರು ಕೂಡ ಸರಿಯಾಗಿ ಬರುವುದಿಲ್ಲ. ಇನ್ನು ಹಾಸ್ಟೇಲ್ನ ಊಟದ ಗುಣಮಟ್ಟವು ಕುಸಿತವಾಗಿದೆ. ಮೇಲ್ವಿಚಾರಕರು ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವುದಿಲ್ಲ. ಹೀಗಾಗಿ, ಹಾಸ್ಟೇಲ್ನಲ್ಲಿ ಅವ್ಯವಸ್ಥೆ ಉಂಟಾಗಿದೆ. ಇದು ವ್ಯಾಸಂಗದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತಿದೆ ಎಂದು ವಿದ್ಯಾರ್ಥಿನಿಯರು ದೂರಿದರು.
ತಮ್ಮ ಸಮಸ್ಯೆಗಳನ್ನು ವಿವಿಯ ಕುಲಪತಿಗಳು ಬಂದು ಕೇಳಿ, ಪರಿಹರಿಸುವ ಭರವಸೆ ನೀಡುವವರೆಗೆ ರಸ್ತೆಯಿಂದ ಕದಲುವುದಿಲ್ಲ ಎಂದು ಪಟ್ಟು ಹಿಡಿದರು. ಇದರಿಂದಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.ಸ್ಥಳಕ್ಕೆ ಆಗಮಿಸಿದ ವಿವಿ ಅಧಿಕಾರಿಗಳು, ಪೊಲೀಸರು ಟ್ಯಾಂಕರ್ ಮೂಲಕ ನೀರು ಪೂರೈಸಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದ ಬಳಿಕ ವಿದ್ಯಾರ್ಥಿನಿಯರ ಪ್ರತಿಭಟನೆ ಕೈಬಿಟ್ಟರು.
‘ನೀರಿನ ಅಭಾವದ ಹಿನ್ನೆಲೆಯಲ್ಲಿ ಈ ಸಮಸ್ಯೆಯಾಗಿತ್ತು. ಟ್ಯಾಂಕರ್ ಮೂಲಕ ಹಾಸ್ಟೇಲ್ಗೆ ನೀರು ಪೂರೈಸಲಾಗಿದೆ. ಬೋರ್ವೆಲ್ ವ್ಯವಸ್ಥೆ ಮಾಡಿ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಲಾಗುವುದು’ ಎಂದು ವಿಶ್ವವಿದ್ಯಾಲಯ ಕುಲಪತಿ ಡಾ. ಜಯಕರ. ಎಸ್. ಎಂ ತಿಳಿಸಿದ್ದಾರೆ.