ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಪಟ್ಟಣದ ತಾಪಂ ಸಭಾಂಗಣದಲ್ಲಿ ಪಿಡಿಒಗಳ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಇದುವೆರಗೂ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಲ್ಲ, ಮುಂದೆ ಬೇಸಿಗೆಯಲ್ಲಿ ಕ್ಷೇತ್ರದಲ್ಲಿ ಸುಮಾರು ೮೮ ಗ್ರಾಮಗಳಲ್ಲಿ ಸಮಸ್ಯೆ ಕಾಣಿಸಿಕೊಳ್ಳಬಹುದೆಂದು ಅಂದಾಜಿಸಲಾಗಿದೆ ಎಂದರು.
ಪರ್ಯಾಯ ವ್ಯವಸ್ಥೆ ರೂಪಿಸಿಅಂತಹ ಗ್ರಾಮಗಳಲ್ಲಿ ಸಮಸ್ಯೆ ಕಂಡ ಕೂಡಲೇ ತಕ್ಷಣವೇ ಪರ್ಯಾಯ ವ್ಯವಸ್ಥೆ ಮಾಡಬೇಕು ನಿರ್ಲಕ್ಷ್ಯ ವಹಿಸಬಾರದೆಂದು ಎಚ್ಚರಿಕೆ ನೀಡಿದರು. ಇದರ ಜೊತೆ ಜಾನುವಾರುಗಳಿಗೂ ಸಮಸ್ಯೆ ಬಾರದಂತೆ ಕ್ರಮವಹಿಸಿ ಎಂದರು.
ತೆರಿಗೆ ವಸೂಲಿ ಚುರುಕುಗೊಳಿಸಿ
ಗ್ರಾಪಂ.ಗಳಲ್ಲಿ ತೆರಿಗೆ ವಸೂಲಿ ಮಂದಗತಿಯಲ್ಲಿ ಸಾಗಿದ್ದು, ವೇಗ ನೀಡಬೇಕು. ಗ್ರಾಪಂ ವ್ಯಾಪ್ತಿಯಲ್ಲಿರುವ ಎಲ್ಲ ಕೆರೆಗಳನ್ನು ಉಳಿಸುವ ಸಲುವಾಗಿ ಸರ್ವೆ ಮಾಡಿಸಿ ಬೇಲಿ ನಿರ್ಮಾಣ ಮಾಡಬೇಕು. ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ಎಲ್ಲಾ ಗ್ರಾಮಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ದೃಷ್ಟಿಯಿಂದ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಬೇಕು. ಕಸ ವಿಲೇವಾರಿ ಘಟಕಗಳನ್ನು ಸ್ಥಾಪಿಸಬೇಕು. ಎಲ್ಲೆಲ್ಲಿ ಘಟಕಗಳು ಸ್ಥಗಿತವಾಗಿದೆಯೋ ಅಲ್ಲಿ ವಿಳಂಬವಾಗದೆ ಪೂರ್ಣಗೊಳಿಸಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಿದರು.ಸಭೆಯಲ್ಲಿ ತಾಪಂ. ಇಒ ರವಿಕುಮಾರ್, ಉಪಕಾರ್ಯದರ್ಶಿ ಶಿವಕುಮಾರ್, ಸಹಾಯಕ ಯೋಜನಾಧಿಕಾರಿ ವೆಂಕಟಾಚಲಪತಿ, ಪಂಚಾಯತ್ ರಾಜ್ ಇಲಾಖೆ ಎಇಇ ರವಿಚಂದ್ರನ್, ಕುಡಿಯುವ ನೀರು ನೈರ್ಮಲ್ಯ ಎಂಜಿನಿಯರ್ ಸೂರ್ಯಪ್ರಕಾಶ್ ಇದ್ದರು.