ಕುಡಿಯುವ ನೀರಿಗೆ ನೀರೆಯರ ಪ್ರತಿಭಟನೆ

KannadaprabhaNewsNetwork |  
Published : Jan 14, 2025, 01:02 AM IST
ಬಂಡಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ನೀರೆಯರ ಪ್ರತಿಭಟನೆ  | Kannada Prabha

ಸಾರಾಂಶ

ಹನೂರು ಸಮೀಪದ ಬಂಡಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಮಹಿಳೆಯರು ಪ್ರತಿಭಟನೆ ನಡೆಸಿದರು.

ಹನೂರು: ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಬಂಡಳ್ಳಿಯ ನಾಲ್ಕನೇ ವಾರ್ಡಿನ ನಿವಾಸಿಗಳು ಗ್ರಾಮ ಪಂಚಾಯತಿ ಮುಂಭಾಗ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನ ಬಂಡಳ್ಳಿ ಗ್ರಾಮದ ಶಿವನಯ್ಯ ಮಾತನಾಡಿ, ಕಳೆದ ಎರಡು ತಿಂಗಳಿನಿಂದ ನಮ್ಮ ನಾಲ್ಕನೇ ವಾರ್ಡಿಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ನಿತ್ಯ ನೀರಿಗೆ ಹಾಹಾಕಾರ ಉಂಟಾಗಿದೆ. ಸಂಕ್ರಾಂತಿ ಹಬ್ಬ ಇರುವುದರಿಂದ ನೀರಿನ ಅವಶ್ಯಕತೆ ಇದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನೆರಡು ದಿನದಲ್ಲಿ ಕುಡಿಯುವ ನೀರು ಪೂರೈಕೆ ಮಾಡದಿದ್ದರೆ ಗ್ರಾಮ ಪಂಚಾಯಿತಿ ಮುಂಭಾಗ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ವೇಳೆ ವಾರ್ಡಿನ ಮಹಿಳೆಯರು ಮಾತನಾಡಿ, ಕಳೆದ ಎರಡು ತಿಂಗಳಿನಿಂದ ಸಮರ್ಪಕವಾಗಿ ನೀರಿಲ್ಲದೆ ಶೌಚಾಲಯ ಹಾಗೂ ಸ್ನಾನ ಮಾಡಲು ಸಮಸ್ಯೆಯಾಗುತ್ತಿದೆ ಎಂದು ತಮ್ಮ‌ ಅಳಲನ್ನು‌ ತೋಡಿಕೊಂಡರು. ಈ ಪ್ರತಿಭಟನೆಯಲ್ಲಿ ಶಿವು, ಮಹೇಂದ್ರ, ಜಗದೀಶ್, ಶಿವಮೂರ್ತಿ, ಪುಟ್ಟರಾಜು, ಪುಟ್ಟು, ರವಿ, ಲಕ್ಷ್ಮಿಪತಿ, ಪ್ರಶಾಂತ್, ಭರತ್, ದೊರೆ, ಮಾದಪ್ಪ, ಮಹೇಶ್, ಸ್ವಾಮಿ ಇತರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ